ಕನ್ನಡಪ್ರಭ ವಾರ್ತೆ ಕಲಬುರಗಿ
ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ ವತಿಯಿಂದ ಆಯೋಜಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ನಾಲ್ಕು ನಿಗಮಗಳಲ್ಲಿ ಕೆಕೆಆರ್ಟಿಸಿ ಆರ್ಥಿಕವಾಗಿ ಸ್ವಲ್ಪ ಸದೃಢವಾಗಿದೆ. ನಷ್ಟ ಅನುಭವಿಸಿದರೂ ಕೂಡಾ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಸೌಲಭ್ಯ ಒದಗಿಸಬೇಕಾಗುತ್ತದೆ. ನಿಗಮ ಲಾಭದಲ್ಲಿ ನಡೆಯಬೇಕಿದ್ದರೆ, ನೌಕರರು ಹಾಗೂ ಸಿಬ್ಬಂದಿ ವರ್ಗದವರು ಸಹಕಾರದಿಂದ ಕೆಲಸ ಮಾಡಬೇಕು ಎಂದರು.ಕಳೆದ 8 ವರ್ಷದಲ್ಲಿ 14,000 ಸಿಬ್ಬಂದಿ ನಿವೃತ್ತರಾದರೂ ನೇಮಕಾತಿ ಆಗಿರಲಿಲ್ಲ. ಆದರೆ ಇದೀಗ 371 (ಜೆ) ಅಡಿಯಲ್ಲಿ ಆಯ್ಕೆಯಾದ 1614 ಸಿಬ್ಬಂದಿಗೆ ನೇಮಕಾತಿ ಆದೇಶವನ್ನು ಫೆ.18ರಂದು ಹಸ್ತಾಂತರಿಸಲಾಗುವುದು. 2024-25 ಸಾಲಿನ ಬಜೆಟ್ನಲ್ಲಿ ರು. 6600 ಕೋಟಿ ಅನುದಾನವನ್ನು ಶಕ್ತಿ ಯೋಜನೆಗೆ ನೀಡಲು ಉದ್ದೇಶಿಸಲಾಗಿದೆ ಎಂದರು.
ವೇದಿಕೆಯ ಮೇಲೆ ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಬಸಪ್ಪಗೌಡ ದರ್ಶನಾಪುರ, ಶಾಸಕರಾದ ಎಂ ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಕೆಕೆಆರ್ ಟಿಸಿ ಎಂಡಿ ರಾಚಪ್ಪ, ಚಂದ್ರಕಾಂತ ಗದ್ದಿಗಿ, ಸಂಗಮನಾಥ ರಬಶೆಟ್ಟಿ ಸೇರಿದಂತೆ ಹಲವರಿದ್ದರು.ಜನರ ಆರ್ಥಿಕ ಸದೃಢತೆಗೆ ಗ್ಯಾರಂಟಿ ಕಾರಣ: ಪ್ರಿಯಾಂಕ್ ಖರ್ಗೆ
ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 5,22,171 ಜನ ಫಲಾನುಭವಿ ಮಹಿಳೆಯರು ಲಾಭ ಪಡೆಯುತ್ತಿದ್ದಾರೆ. ಅನ್ನ ಭಾಗ್ಯದಡಿ ಜಿಲ್ಲೆಯಲ್ಲಿ 19,16,144 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಶಕ್ತಿ ಯೋಜನೆಯಡಿ ಪ್ರತಿನಿತ್ಯ ರಾಜ್ಯಾದ್ಯಂತ 60 ಲಕ್ಷ ಮಹಿಳೆಯರು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 21.05 ಕೋಟಿ ಮಹಿಳೆಯರು ಹಾಗೂ ಕಲಬುರಗಿ ಜಿಲ್ಲೆಯಲ್ಲಿ 4.27 ಕೋಟಿ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 650 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕಿತ್ತು. ಅದರಲ್ಲಿ ಇನ್ನೂ 240 ಕೋಟಿ ಅನುದಾನ ಬಿಡುಗಡೆ ಮಾಡಬೇಕಿದೆ ಎಂದರು.