ಮದ್ಯ ವರ್ಜನ ಶಿಬಿರದಲ್ಲಿ ವ್ಯಸನ ಮುಕ್ತರಾದ 67 ಮಂದಿ: ಮದ್ಯ ರಾಕ್ಷಸನ ದಹನ

KannadaprabhaNewsNetwork |  
Published : Nov 27, 2024, 01:02 AM IST
25ಕೆಎಂಎನ್ ಡಿ21 | Kannada Prabha

ಸಾರಾಂಶ

ಬೂಕನಕೆರೆ ಗ್ರಾಪಂ, ಬೆಳ್ತಂಗಡಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ 1887ನೇ ಮದ್ಯವರ್ಜನ ಶಿಬಿರದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ 67 ಜನರು ಭಾಗವಹಿಸಿ ವ್ಯಸನ ಮುಕ್ತಗೊಂಡು ಹೊಸ ಬದುಕಿನ ಕಡೆ ಮುನ್ನಡೆದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 8 ದಿನಗಳ ಮದ್ಯ ವರ್ಜನ ಶಿಬಿರ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ಬೂಕನಕೆರೆ ಗ್ರಾಪಂ, ಬೆಳ್ತಂಗಡಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ 1887ನೇ ಮದ್ಯವರ್ಜನ ಶಿಬಿರದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ 67 ಜನರು ಭಾಗವಹಿಸಿ ವ್ಯಸನ ಮುಕ್ತಗೊಂಡು ಹೊಸ ಬದುಕಿನ ಕಡೆ ಮುನ್ನಡೆದರು.

ಶಿಬಿರಾರ್ಥಿಗಳಿಗೆ ಸಂಸ್ಥೆಯಿಂದ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ನಿತ್ಯ ಶಿಬಿರಾರ್ಥಿಗಳಿಗೆ ಭಜನೆ, ಆರೋಗ್ಯ ತಪಾಸಣೆ, ಮನರಂಜನೆ ಕಾರ್ಯಕ್ರಮ, ವಿವಿಧ ಕ್ಷೇತ್ರದ ಪರಿಣಿತರಿಂದ ಕುಡಿತ ಚಟ ಬಿಡಿಸಲು, ಮನಸ್ಸು ಪರಿವರ್ತನೆಗಾಗಿ ವಿಶೇಷ ಉಪನ್ಯಾಸ ಆಯೋಜಿಸಲಾಗಿತ್ತು. ಚಟಮುಕ್ತರಾದವರು ಧರ್ಮಸ್ಥಳ ಸಂಸ್ಥೆ ಕಾರ್ಯಕ್ಕೆ ಕೃತಜ್ಞತೆ ಅರ್ಪಿಸಿದರು.

ಶಿಬಿರಾರ್ಥಿಗಳು ಮತ್ತು ಸಂಬಂಧಿಕರು ಹಾಗೂ ಬೂಕನಕೆರೆ ಗ್ರಾಮಸ್ಥರ ಜೊತೆಗೂಡಿ ಮದ್ಯಪಾನಕ್ಕೆ ಧಿಕ್ಕಾರ, ಯುವಕರೆ ಕುಡಿತದ ಚಟಕ್ಕೆ ಒಳಗಾಗಬೇಡಿ, ಕುಡಿತ ಬಿಡಿ, ಬದುಕು ಕಟ್ಟಿ ಎಂದು ಘೋಷಣೆಗಳನ್ನು ಕೂಗುತ್ತಾ ಗ್ರಾಮದ ಮುಖ್ಯ ರಸ್ತೆಯಲ್ಲಿ ಮದ್ಯ ರಾಕ್ಷಸನ ಪ್ರತಿಕೃತಿಗೆ ಬೆಂಕಿ ಹಚ್ಚುವ ಮೂಲಕ ಮದ್ಯ ರಾಕ್ಷಸನ ದಹನ ನಡೆಸಿ ಸಂಭ್ರಮಿಸಿದರು.

ಈ ವೇಳೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ತಾಲೂಕು ಯೋಜನಾಧಿಕಾರಿ ತಿಲಕ್ ರಾಜ್, ಶಿಬಿರ ಅಧ್ಯಕ್ಷರಾದ ಶ್ಯಾಂಪ್ರಸಾದ್, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರ್ಥಿಕ ಪ್ರಗತೀಲಿ ಮಹಿಳೆ ಪಾತ್ರ ಹಿರಿದು: ಮಂಜುಳಾ ಕುಲಕರ್ಣಿ
ಎಸ್ಸೆಸ್ಸೆಲ್ಸಿ ದಾಖಲೆ ಫಲಿತಾಂಶದತ್ತ ಕುದೂರು ಕೆಪಿಎಸ್ ಶಾಲೆ