ವಿಜಯನಗರದ ಯುವಕ ಮಂಜುನಾಥಗೆ ಒಲಿದ 7 ಸರ್ಕಾರಿ ಹುದ್ದೆ

KannadaprabhaNewsNetwork |  
Published : Feb 22, 2026, 02:30 AM ISTUpdated : Feb 22, 2026, 06:50 AM IST
Manjunath

ಸಾರಾಂಶ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವ ವಿದ್ಯಾರ್ಥಿಗಳು ಸರ್ಕಾರಿ ಹುದ್ದೆಗೇರಲು ಸಿಕ್ಕ ಸಿಕ್ಕ ಕಡೆಗಳಲ್ಲಿ ತರಬೇತಿ ಪಡೆದು ಕಷ್ಟ ಪಟ್ಟು ಒಂದು ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳಲು ಹೆಣಗಾಡುವ ಇಂದಿನ ಪರಿಸ್ಥಿತಿಯಲ್ಲಿ ಇಲ್ಲೊಬ್ಬ ಗ್ರಾಮೀಣ ಯುವಕನಿಗೆ  7 ಸರ್ಕಾರಿ ಹುದ್ದೆಗಳು ಅರಸಿ ಬಂದಿವೆ.

ಹೂವಿನಹಡಗಲಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವ ವಿದ್ಯಾರ್ಥಿಗಳು ಸರ್ಕಾರಿ ಹುದ್ದೆಗೇರಲು ಸಿಕ್ಕ ಸಿಕ್ಕ ಕಡೆಗಳಲ್ಲಿ ತರಬೇತಿ ಪಡೆದು ಕಷ್ಟ ಪಟ್ಟು ಒಂದು ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳಲು ಹೆಣಗಾಡುವ ಇಂದಿನ ಪರಿಸ್ಥಿತಿಯಲ್ಲಿ ಇಲ್ಲೊಬ್ಬ ಗ್ರಾಮೀಣ ಯುವಕನಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 7 ಸರ್ಕಾರಿ ಹುದ್ದೆಗಳು ಅರಸಿ ಬಂದಿವೆ.

ತಾಲೂಕಿನ ಮಾಗಳದ ಮಠದ ಮಂಜುನಾಥ ಎಂಬವರಿಗೆ 7 ಸರ್ಕಾರಿ ಹುದ್ದೆಗಳು ಒಲಿದು ಬಂದಿವೆ. ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾನೆ.

7 ಹುದ್ದೆಗಳಿಗೆ ಆಯ್ಕೆ

ತಾಲೂಕಿನ ಗುಜನೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಠದ ವೀರಣ್ಣ ಅವರ ಪುತ್ರರಾಗಿದ್ದು, ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ತೋಟಗಾರಿಕೆಯಲ್ಲಿ ಪದವಿ ಪಡೆದು, ಉನ್ನತ ವ್ಯಾಸಂಗಕ್ಕೆ ಹೋಗದೇ ನಿರಂತರ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು 7 ಹುದ್ದೆಗಳಿಗೆ ಆಯ್ಕೆಯಾಗಿದ್ದಾನೆ.

ಯಾವ್ಯಾವ ಹುದ್ದೆ ?

ಬೆಂಗಳೂರಿನ ಕೆಪಿಟಿಸಿಎಲ್‌ನಲ್ಲಿ ಪ್ರಥಮ ದರ್ಜೆ ಸಹಾಯಕ, ಕಟ್ಟಡ ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ, ಚಾಮರಾಜನಗರ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ, ಪಿಡಿಒ ಗ್ರೇಡ್-2, ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆ ಸೇರಿದಂತೆ ಒಟ್ಟು 7 ಹುದ್ದೆಗಳಿಗೆ ಆಯ್ಕೆಯಾಗಿದ್ದಾನೆ. ಕೊನೆಗೆ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗೆ ಸೇರಿ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ತಾಲೂಕಿನ ಮಾಗಳದ ಮಠದ ಮಂಜುನಾಥ ಎಂಬವರಿಗೆ 7 ಸರ್ಕಾರಿ ಹುದ್ದೆಗಳು ಒಲಿದು ಬಂದಿವೆ. ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾನೆ.

ತಾಲೂಕಿನ ಗುಜನೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಠದ ವೀರಣ್ಣ ಅವರ ಪುತ್ರರಾಗಿದ್ದು, ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ತೋಟಗಾರಿಕೆಯಲ್ಲಿ ಪದವಿ ಪಡೆದು, ಉನ್ನತ ವ್ಯಾಸಂಗಕ್ಕೆ ಹೋಗದೇ ನಿರಂತರ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು 7 ಹುದ್ದೆಗಳಿಗೆ ಆಯ್ಕೆಯಾಗಿದ್ದಾನೆ.

ಬೆಂಗಳೂರಿನ ಕೆಪಿಟಿಸಿಎಲ್‌ನಲ್ಲಿ ಪ್ರಥಮ ದರ್ಜೆ ಸಹಾಯಕ, ಕಟ್ಟಡ ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ, ಚಾಮರಾಜನಗರ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ, ಪಿಡಿಒ ಗ್ರೇಡ್-2, ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆ ಸೇರಿದಂತೆ ಒಟ್ಟು 7 ಹುದ್ದೆಗಳಿಗೆ ಆಯ್ಕೆಯಾಗಿದ್ದಾನೆ. ಕೊನೆಗೆ ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆಗೆ ಸೇರಿ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಕ್ಲೈಮ್ಯಾಕ್ಸ್‌ನತ್ತ : ಜಾರಕಿಹೊಳಿ
ಸರ್ಕಾರಿ ಕಾಮಗಾರಿಗೆ ಅನುಮತಿಸಲು ಲಂಚ ಸ್ವೀಕಾರ- ಶಾಸಕ ಲೋಕಾ ಬಲೆಗೆ!