ಕನ್ನಡಪ್ರಭ ವಾರ್ತೆ ಪಾಂಡವಪುರ
ನಾಳೆ ವಿಕಲಚೇತನರ ಉದ್ಯೋಗ ಮೇಳ
ಕನ್ನಡಪ್ರಭ ವಾರ್ತೆ ಮಂಡ್ಯಸ್ವಾಭಿಮಾನಿ ಫೌಂಡೇಷನ್ ಮಂಡ್ಯ, ಆಶಾದೀಪ ಸಂಸ್ಥೆ ಇಳಕಲ್ಸ್, ದೀನಾಬಂಧು ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಟ್ರೈನ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ವಿಕಲಚೇತನರ ಉದ್ಯೋಗ ಮೇಳ ಫೆ.೨೧ರಂದು ನಗರದ ಗುರು ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಸಂಚಾಲಕ ಎನ್.ನಂದೀಶ್ ತಿಳಿಸಿದರು.
ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ ಮೇಳ ನಡೆಯಲಿದ್ದು ಸುಮಾರು ೨೦ ಕಂಪನಿಗಳು ಭಾಗವಹಿಸಲಿವೆ. ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳನ್ನೊಳಗೊಂಡಂತೆ ಮೇಳ ಆಯೋಜನೆ ಮಾಡಲಾಗಿದೆ. ಏಳನೇ ತರಗತಿಯಿಂದ ಪದವಿವರೆಗೆ ವ್ಯಾಸಂಗ ಮಾಡಿರುವ ವಿಕಲಚೇತನರಿಗೆ ಆದ್ಯತೆಯ ಮೇರೆಗೆ ಉದ್ಯೋಗವಕಾಶ ಕಲ್ಪಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ನಮ್ಮ ಸಂಸ್ಥೆಯಿಂದ ವಿಕಲಚೇತನರಿಗೆ ಉಚಿತವಾಗಿ ಕೌಶಲ್ಯಾಧಾರಿತ ತರಬೇತಿಯನ್ನು ದಿನಗಳವರೆಗೆ ನೀಡಿ ಅವರಿಗೆ ಉದ್ಯೋಗ ದೊರಕಿಸಿಕೊಡಲಾಗುತ್ತಿದೆ. ಕಂಪನಿಗಳಿಗೆ ಆಯ್ಕೆಯಾಗುವ ವೇಳೆಗೆ ಸಂಪೂರ್ಣ ಪರಿಣತಿ ಪಡೆದಿರುವಂತೆ ತರಬೇತಿ ನೀಡಲಾಗುವುದು ಎಂದರು.
ಇದುವರೆಗೂ ನಮ್ಮ ಸಂಸ್ಥೆಯಿಂದ ೩೨ ಮಂದಿ ವಿಕಲಚೇತನರಿಗೆ ಉದ್ಯೋಗವಕಾಶಗಳನ್ನು ದೊರಕಿಸಿಕೊಡಲಾಗಿದೆ. ಅರ್ಹ ವಿಕಲಚೇತನರು ಮೇಳದಲ್ಲಿ ಭಾಗವಹಿಸಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು.ಗೋಷ್ಠಿಯಲ್ಲಿ ಕೆ..ಪಿ.ವನಿತಾ, ಎಂ.ಕೆ.ಮುರಳಿ, ಸುರೇಶ್, ಬಸವರಾಜು ಇದ್ದರು.