ನಮ್ಮ ಊರು ನಮ್ಮ ಕೆರೆ ಕಾರ್ಯಕ್ರಮದಡಿ 789ನೇ ಕೆರೆ ಹಸ್ತಾಂತರ

KannadaprabhaNewsNetwork |  
Published : May 29, 2025, 12:21 AM IST
ಪೋಟೊ ಕ್ಯಾಪ್ಸನ್: ಡಂಬಳ ಹೋಬಳಿಯ ಬರದೂರು ಗ್ರಾಮದಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಗ್ರಾಮ ಪಂಚಾಯಿತಿ ಮೆವುಂಡಿ ಮತ್ತು ಕೆರೆ ಅಭಿವೃದ್ಧಿ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ದೇವೀಂದ್ರಪ್ಪ ಗದಗ ಅವರು ಭೂದಾನ ನೀಡಿದ ಜಮೀನಿನಲ್ಲಿ ನಮ್ಮ ಊರು ನಮ್ಮ ಕೆರೆ ಕಾರ್ಯಕ್ರಮ ದಡಿ ಕೆರೆಗೆ ಬಾಗಿನ ಅರ್ಪಿಸಿದ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ,ಭೂಧಾನಿ ದೇವೀಂದ್ರಪ್ಪ ಗದಗ, ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಇದ್ದರು.ಪೋಟೊ ಕ್ಯಾಪ್ಸನ್: ಡಂಬಳ ಹೋಬಳಿಯ ಬರದೂರು ಗ್ರಾಮದಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಗ್ರಾಮ ಪಂಚಾಯಿತಿ ಮೆವುಂಡಿ ಮತ್ತು ಕೆರೆ ಅಭಿವೃದ್ಧಿ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ದೇವೀಂದ್ರಪ್ಪ ಗದಗ ಅವರು ಭೂದಾನ ನೀಡಿದ ಜಮೀನಿನಲ್ಲಿ ನಮ್ಮ ಊರು ನಮ್ಮ ಕೆರೆ ಕಾರ್ಯಕ್ರಮ ದಡಿ ಕೆರೆ ಗ್ರಾ.ಪಂ ಹಸ್ತಾಂತರ ಮಾಡಲಾಯಿತು. | Kannada Prabha

ಸಾರಾಂಶ

ಡಂಬಳ ಹೋಬಳಿಯ ಬರದೂರು ಗ್ರಾಮದಲ್ಲಿ ನಮ್ಮ ಊರು ನಮ್ಮ ಕೆರೆ ಕಾರ್ಯಕ್ರಮದಡಿ ಜೀರ್ಣೋದ್ಧಾರ ಆಗಿರುವ 789ನೇ ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಡಂಬಳ: ಧರ್ಮಸ್ಥಳ ಕ್ಷೇತ್ರದ ಅನೇಕ ಕಾರ್ಯಕ್ರಮಗಳಲ್ಲಿ ಕೆರೆ ಅಭಿವೃದ್ಧಿ ಅತ್ಯಂತ ಪ್ರಮುಖವಾದದ್ದು ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.

ಡಂಬಳ ಹೋಬಳಿಯ ಬರದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮೇವುಂಡಿ ಗ್ರಾಮ ಪಂಚಾಯಿತಿ ಮತ್ತು ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ದೇವೀಂದ್ರಪ್ಪ ಗದಗ ಅವರು ಭೂದಾನ ನೀಡಿದ ಜಮೀನಿನಲ್ಲಿ ನಮ್ಮ ಊರು ನಮ್ಮ ಕೆರೆ ಕಾರ್ಯಕ್ರಮದಡಿ ಜೀರ್ಣೋದ್ಧಾರ ಆಗಿರುವ 789ನೇ ಕೆರೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ, ಮನುಷ್ಯರು ಹಾಗೂ ಪ್ರಾಣಿ-ಪಕ್ಷಿಗಳಿಗೆ ನೀರು ಅತಿ ಅಗತ್ಯ. ಇದಕ್ಕಾಗಿ ಜೀವಜಲ ಉಳಿಸುವೆಡೆಗೆ ಕೆರೆ ಪುನಃಶ್ಚೇತನ ಕಾರ್ಯ ಕೈಗೊಂಡಿರುವುದು ಪ್ರಶಂಸನೀಯ ಎಂದು ಹೇಳಿದರು.

ಮುಂಡರಗಿ ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಮಾತನಾಡಿ, ದೇವೀಂದ್ರಪ್ಪ ಗದಗ ಅವರ ಕೆರೆಗಾಗಿ ಭೂದಾನ ನೀಡಿರುವುದು ಪ್ರಶಂಸನೀಯ. ಕೆರೆಯನ್ನು ಸಂರಕ್ಷಿಸಿದಲ್ಲಿ ಗಂಗೆಯನ್ನು ರಕ್ಷಿಸಿದಂತೆ. ಹಾಗಾಗಿ ಪುನಃಶ್ವೇತನಗೊಳಿಸಿದ ಕೆರೆಯ ಹಾಗೂ ಶುಚಿತ್ವ ಕಾಯ್ದುಕೊಳ್ಳುವುದು ಗ್ರಾಮಸ್ಥರ ದೊಡ್ಡ ಹೊಣೆ ಎಂದು ಹೇಳಿದರು.

ಹಿರಿಯರಾದ ಗೋಣಿಬಸಪ್ಪ ಕೊರ್ಲಹಳ್ಳಿ, ಎ.ಕೆ. ಮುಲ್ಲಾನವರ ಮಾತನಾಡಿ, ಬೆಳ್ಳಿ, ಬಂಗಾರ ನೋಡಿ, ಹಾಕಿಕೊಂಡು ಆನಂದಪಡಬಹುದು. ಆದರೆ ಪ್ರತಿಯೊಬ್ಬರಿಗೆ ಆವಶ್ಯಕವಾಗಿರುವುದು ನೀರು, ಗಾಳಿ, ಆಹಾರ. ಈ ಮೂರರಲ್ಲಿ ಒಂದು ಇಲ್ಲದಿದ್ದರೂ ಬದುಕಲು ಸಾಧ್ಯವಿಲ್ಲ. ಸ್ವಚ್ಛವಾದ ಪ್ರಕೃತಿ ಉಳಿಸಿ ಬೆಳೆಸಬೇಕಾಗಿದೆ. ಆ ದೂರದೃಷ್ಟಿಯಿಂದ ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆ ಮತ್ತು ಡಾ. ಹೇಮಾವತಿ ವಿ. ಹೆಗ್ಗಡೆ ಅವರು ನಾಡಿನಾದ್ಯಂತ ಶ್ರಮಿಸುತ್ತಿರುವುದು ಪ್ರಶಂಸನೀಯ ಎಂದು ಹೇಳಿದರು.

ಪಿಡಿಒ ಫಕ್ರುದ್ದೀನ್‌ ನದಾಫ್‌ ಮಾತನಾಡಿ, ಗ್ರಾಮಸ್ಥರ ಬೇಡಿಕೆಯಂತೆ ಗ್ರಾಪಂ ಅಧ್ಯಕ್ಷರು, ಸದಸ್ಯರ ಸಹಕಾರ ಪಡೆದು, ಕೆರೆಯ ಸುತ್ತ ಕಲ್ಲು ಹೊಂದಿಸುವುದು ಮತ್ತು ತಂತಿ ಬೇಲಿ ಹಾಕಲಾಗುವುದು ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗದಗ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಮಾತನಾಡಿ, ಧರ್ಮಸ್ಥಳ ಸಂಸ್ಥೆ ರಾಜ್ಯದ ಉದ್ದಗಲಕ್ಕೂ 152 ಯೋಜನೆಗಳ ಮೂಲಕ ಆರ್ಥಿಕ ಸಲಬಲತೆಗೆ ಶ್ರಮಿಸುತ್ತಿದೆ. ಕೆರೆಗಳ ಅಭಿವೃದ್ಧಿ ಮೂಲಕ ಗ್ರಾಮಗಳ ಶ್ರೇಯೋಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ಗಾಂಧೀಜಿ ಕಂಡ ಕನಸನ್ನು ಸಾಕಾರಗೊಳಿಸುತ್ತಿದೆ ಎಂದು ಹೇಳಿದರು.

ಭೂದಾನಿಗಳಾದ ದೇವೀಂದ್ರಪ್ಪ ಗದಗ, ಚಂದ್ರಶೇಖರ ಜೆ., ಗ್ರಾಪಂ ಅಧ್ಯಕ್ಷೆ ದುರಗಮ್ಮ ತಳಗೇರಿ, ಉಪಾಧ್ಯಕ್ಷೆ ಮಲ್ಲವ್ವ ಹಾರೋಗೇರಿ, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಪರ್ವತಗೌಡ ಹಿರೇಗೌಡ, ಸತೀಶ ಎಸ್.ಎಂ., ವಿಶಾಲಾ ಮಲ್ಲಾಪುರ, ಅಣ್ಣಪ್ಪ ಬಾರಕಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ