ರಾಮನಾಥಪುರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

KannadaprabhaNewsNetwork |  
Published : Aug 16, 2025, 12:00 AM IST
15ಎಚ್ಎಸ್ಎನ್10 : ರಾಮನಾಥಪುರದ  ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ  ಕಾಲೇಜು ಗೌರವಧ್ಯಕ್ಷರು ಎಸ್. ಟಿ. ಕೃಷ್ಣೇಗೌಡರು ಧ್ವಜಾರೋಹಣ ನೇರವೇರಿಸಿದರು. | Kannada Prabha

ಸಾರಾಂಶ

ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೇರಿಸಿದ ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ರಾಷ್ಟ್ರಧ್ವಜವು ಏಕತೆ, ಸ್ವಾತಂತ್ರ, ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದೆ. ರಾಷ್ಟ್ರಧ್ವಜ ವಿವಿಧ ಧರ್ಮ, ವಿವಿಧ ಪ್ರದೇಶ ಮತ್ತು ವಿವಿಧ ಸಂಸ್ಕೃತಿಗಳು ಒಂದು ಸಂಕೇತದ ಅಡಿಯಲ್ಲಿ ಒಂದಾಗಿರುವುದನ್ನು ಸೂಚಿಸುತ್ತದೆ ಎಂದು ಕೃಷ್ಣೇಗೌಡರು ತಿಳಿಸಿದರು. ಮಹನೀಯರನ್ನು ಸ್ಮರಿಸವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಗೌರವಾಧ್ಯಕ್ಷರಾದ ಎಸ್.ಟಿ. ಕೃಷ್ಣೇಗೌಡರು ತಿಳಿಸಿದರು.

ರಾಮನಾಥಪುರ: ನಮ್ಮ ಭಾರತದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಹಿರಿಯರು ರಾಷ್ಟ್ರೀಯ ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನ ಮಾಡಿದ್ದಾರೆ. ಅಂತಹ ಮಹನೀಯರನ್ನು ಸ್ಮರಿಸವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಗೌರವಾಧ್ಯಕ್ಷರಾದ ಎಸ್.ಟಿ. ಕೃಷ್ಣೇಗೌಡರು ತಿಳಿಸಿದರು.

ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೇರಿಸಿದ ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ರಾಷ್ಟ್ರಧ್ವಜವು ಏಕತೆ, ಸ್ವಾತಂತ್ರ, ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದೆ. ರಾಷ್ಟ್ರಧ್ವಜ ವಿವಿಧ ಧರ್ಮ, ವಿವಿಧ ಪ್ರದೇಶ ಮತ್ತು ವಿವಿಧ ಸಂಸ್ಕೃತಿಗಳು ಒಂದು ಸಂಕೇತದ ಅಡಿಯಲ್ಲಿ ಒಂದಾಗಿರುವುದನ್ನು ಸೂಚಿಸುತ್ತದೆ ಎಂದು ಕೃಷ್ಣೇಗೌಡರು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಎಸ್. ಸರ್ವಮಂಗಳ, ಎಸ್‌ಡಿಎಂಸಿ ಸಮಿತಿ ಸದಸ್ಯರಾದ ಮೈಕ್ ಮಂಜಣ್ಣ, ಗಂಗೂರು ಭರತ್, ಸಿದ್ಧರಾಜು ಮುಂತಾದವರು ಭಾಗವಹಿಸಿದ್ದರು. ರಾಮನಾಥಪುರದ ಅಂಗನವಾಡಿ ಕೇಂದ್ರ, ವಿದ್ಯಾನಿಕೇತನ ಶಾಲೆ, ಶ್ರೀ ಪಟ್ಟಾಭಿರಾಮ ಗ್ರಾಮಾಂತರ ಪೌಢಶಾಲೆ, ದಕ್ಷಿಣ ಕಾಶಿ ವಿದ್ಯಾಸಂಸ್ಥೆ, ಜೆ.ಎಸ್.ಪಿ. ಶಾಲೆ, ವೆಂಕಟೇಶ್ವರ ಪೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಂಗೊಳ್ಳಿ ರಾಯಣ್ಣ ಸಂಘ, ಕಾಲೇಜ್ಕ ರಕ್ಷಣಾ ವೇದಿಕೆ, ಕನಕ ಯುವಕರ ಸಂಘ, ಬಸವೇಶ್ವರ ಯುವಕ ಸಂಘ, ಆಟೋ ಮತ್ತು ಗೂಡ್ಸ್ ಮಾಲೀಕರು ಹಾಗೂ ಚಾಲಕರ ಸಂಘ ಮುಂತಾದ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ದಿನಾಚಾರಣೆ ಅಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಕಳಕಳಿಯ ಎಸ್ಎಸ್‌ ಅಪ್ರತಿಮ ನಾಯಕ: ಸೈಯದ್‌ ನುಡಿನಮನ
ಶಿವಶಂಕರಪ್ಪ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ