ಮೈಸೂರಿನ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಸೆಲ್ಫಿ ಮೂಡ್. ಚಿತ್ರ- ಅನುರಾಗ್ ಬಸವರಾಜ್
ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತವು ಶುಕ್ರವಾರ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ನಗರ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.
ಬನ್ನಿಮಂಟಪ ಮೈದಾನಕ್ಕೆ ಪ್ರವೇಶಿಸಿದ ಪ್ರತಿಯೊಬ್ಬರನ್ನು ಪೊಲೀಸರು ಪರಿಶೀಲಿಸಿದರು. ಅಲ್ಲದೆ, ಸಾರ್ವಜನಿಕರ ಬ್ಯಾಗ್ ಗಳನ್ನು ಸಹ ಪರಿಶೀಲಿಸಿದ ಬಳಿಕವೇ ಒಳಗೆ ತೆರಳಲು ಅವಕಾಶ ಕಲ್ಪಿಸಿದರು.ಮೈದಾನ ಸುತ್ತಾಮುತ್ತಾ ನೂರಾರು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಸಂಚಾರ ಪೊಲೀಸರು ಅಲ್ಲಲ್ಲಿ ಸಂಚಾರ ದಟ್ಟಣೆ ನಿರ್ವಹಿಸುತ್ತಿದ್ದರು.
ಸರ್ಕಾರಿ ನೌಕರರ ಗೈರು
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾತ್ರ ಪಾಲ್ಗೊಂಡಿದ್ದರು. ಆದರೆ, ಸರ್ಕಾರಿ ನೌಕರರು ಹಲವರು ಗೈರಾಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಆಗಮಿಸಿದ್ದ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಅವರ ಪೋಷಕರು ಮೈದಾನಕ್ಕೆ ಆಗಮಿಸಿದ್ದರು. ಉಳಿದಂತೆ ಮೈದಾನದ ಅರ್ಧ ಭಾಗ ಕೂಡ ಜನರ ಇರಲಿಲ್ಲ. ಅರ್ಧ ಭಾಗಕ್ಕೂ ಹೆಚ್ಚಿನ ಜಾಗವು ಖಾಲಿ ಖಾಲಿಯಾಗಿತ್ತು.