ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಗೌಡೇನಹಳ್ಳಿ ಮೂಲದ ವಿಜಯಕುಮಾರಿ, ಆರ್ಥಿಕ ಮುಗ್ಗಟ್ಟು ಮತ್ತು ಗಾಯದ ಸಮಸ್ಯೆಯಿಂದ ಕ್ರೀಡಾಲೋಕದಿಂದಲೇ ದೂರ ಸರಿಯುವ ನಿರ್ಧಾರಕ್ಕೆ ಬಂದಿದ್ದರು. ಈ ವೇಳೆ ಅವರ ನೆರವಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಂತು ಸರ್ಕಾರದಿಂದ ₹10 ಲಕ್ಷ ಪ್ರೋತ್ಸಾಹಧನ ಘೋಷಿಸಿದ್ದರು.
ಆ ಪೈಕಿ ಮೊದಲ ಕಂತಿನ ₹5 ಲಕ್ಷ ಗಳನ್ನು ಬಿಬಿಎಂಪಿ ಮೂಲಕ ಈಗಾಗಲೇ ಹಸ್ತಾಂತರಿಸಿದ್ದು, ಇದು ಅವರ ತರಬೇತಿ ಮತ್ತು ಚಿಕಿತ್ಸೆಗೆ ಸಂಜೀವಿನಿಯಾಯಿತು. ಛಲವೊಂದಿದ್ದರೆ ಎಂತಹ ಕಷ್ಟಗಳನ್ನೂ ಮೆಟ್ಟಿ ನಿಲ್ಲಬಹುದು ಎಂಬುದಕ್ಕೆ ಮಂಡ್ಯದ ಕ್ರೀಡಾಪಟು ಜಿ.ಕೆ.ವಿಜಯಕುಮಾರಿ ಅವರ ಸಾಧನೆಯೇ ಸಾಕ್ಷಿ.ಪದಕ ಗೆದ್ದ ನಂತರ ಮಾತನಾಡಿದ ವಿಜಯಕುಮಾರಿ, ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಗೆದ್ದಿರುವುದು ಖುಷಿ ತಂದಿದೆ. ನನ್ನ ಸಂಕಷ್ಟದ ಸಮಯದಲ್ಲಿ ಧೈರ್ಯ ತುಂಬಿ ಆರ್ಥಿಕ ಸಹಾಯ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಸರ್ ಅವರಿಗೆ ನಾನು ಚಿರಋಣಿ. ಅವರ ಬೆಂಬಲವಿಲ್ಲದಿದ್ದರೆ ಈ ಮಟ್ಟದ ಸಾಧನೆ ಅಸಾಧ್ಯವಾಗಿತ್ತು ಎಂದು ಭಾವುಕರಾಗಿ ನುಡಿದಿದ್ದಾರೆ.
-----------
ವಿಜಯಕುಮಾರಿ ಅವರ ಈ ಸಾಧನೆ ಮಂಡ್ಯ ಜಿಲ್ಲೆ ಮತ್ತು ಇಡೀ ಕರ್ನಾಟಕ ರಾಜ್ಯಕ್ಕೆ ಹೆಮ್ಮೆಯ ವಿಷಯ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೆರವು ನಿಜಕ್ಕೂ ಒಬ್ಬ ಕ್ರೀಡಾಪಟುವಿನ ಬೆಳವಣಿಗೆಗೆ ಪೂರಕವಾಗಿದೆ. ಮುಂದಿನ ಕ್ರೀಡೆಗಳಿಗೆ ಅಗತ್ಯ ಸಹಕಾರ ನೀಡುವುದಾಗಿಯೂ ಡಿಸಿಎಂ ಹೇಳಿದ್ದಾರೆ. ಇನ್ನು ₹5 ಲಕ್ಷ ಶೀಘ್ರ ಅವರಿಗೆ ನೀಡಲಾಗುವುದು. ವಿಜಯಕುಮಾರಿ ಅವರನ್ನು ಕರೆಸಿ ಸನ್ಮಾನಿಸುವುದಾಗಿಯೂ ಡಿಸಿಎಂ ಹೇಳಿದ್ದಾರೆ.-ದಿನೇಶ್ ಗೂಳಿಗೌಡ, ಶಾಸಕರು ಹಾಗೂ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷರು.