ಕನ್ನಡಪ್ರಭ ವಾರ್ತೆ ವಿಜಯಪುರ ನ್ಯಾಯಾಲಯದಲ್ಲಿ ವಿಚಾರಣೆಗಿದ್ದ ಪ್ರಕರಣಗಳ ಪೈಕಿ ೧೧,೬೨೩ ಪ್ರಕರಣಗಳನ್ನು ಕಕ್ಷಿದಾರರು ಹಾಗೂ ನ್ಯಾಯವಾದಿಗಳ ಸಹಾಯದಿಂದ ರಾಜೀ ಸಂದಾನದ ಮೂಲಕ ಲೋಕ ಅದಾಲತ್ನಲ್ಲಿ ಇತ್ಯರ್ಥಪಡಿಸಲಾಯಿತು. ಅದರಲ್ಲೂ ವಿಶೇಷವಾಗಿ ಕೌಟುಂಬಿಕ ಕಾರಣಗಳಿಂದ ಬೇರೆಯಾಗಲು ನಿರ್ಧರಿಸಿದ್ದ ಜಿಲ್ಲೆಯ ೮ ದಂಪತಿಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀ ಸಂಧಾನ ಮಾಡಿಸಿ ಮತ್ತೆ ಒಂದಾಗಿ ಬಾಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಪ್ರಕರಣ ಇತ್ಯರ್ಥ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ವಿಜಯಪುರ
ನ್ಯಾಯಾಲಯದಲ್ಲಿ ವಿಚಾರಣೆಗಿದ್ದ ಪ್ರಕರಣಗಳ ಪೈಕಿ ೧೧,೬೨೩ ಪ್ರಕರಣಗಳನ್ನು ಕಕ್ಷಿದಾರರು ಹಾಗೂ ನ್ಯಾಯವಾದಿಗಳ ಸಹಾಯದಿಂದ ರಾಜೀ ಸಂದಾನದ ಮೂಲಕ ಲೋಕ ಅದಾಲತ್ನಲ್ಲಿ ಇತ್ಯರ್ಥಪಡಿಸಲಾಯಿತು. ಅದರಲ್ಲೂ ವಿಶೇಷವಾಗಿ ಕೌಟುಂಬಿಕ ಕಾರಣಗಳಿಂದ ಬೇರೆಯಾಗಲು ನಿರ್ಧರಿಸಿದ್ದ ಜಿಲ್ಲೆಯ ೮ ದಂಪತಿಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀ ಸಂಧಾನ ಮಾಡಿಸಿ ಮತ್ತೆ ಒಂದಾಗಿ ಬಾಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಪ್ರಕರಣ ಇತ್ಯರ್ಥ ಮಾಡಿದ್ದಾರೆ.ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗಿದ್ದ ಹಲವಾರು ಪ್ರಕರಣಗಳ ಆಸ್ತಿ ವಿಭಾಗ ಕೋರಿದ ೧೪೫ ದಾವೆಗಳು, ೧೪೨ ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ೧೭೩ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ೪೬ ಪ್ರಕರಣಗಳು, ರಾಜಿಯಾಗಬಹುದಾದ ೮೦ ಕ್ರಿಮಿನಲ್ ಪ್ರಕರಣಗಳು ಹಾಗೂ ೭೭ ಅಮಲ್ದಾರಿ ಪ್ರಕರಣಗಳನ್ನು ಸಂಧಾನದ ಮೂಲಕ ಬಗೆಹರಿಸಲಾಯಿತು.ಈ ಸಂದಂರ್ಭದಲ್ಲಿ ನ್ಯಾಯಾಧೀಶ ಶಿವಾಜಿ ನಲವಡೆ ಮಾತನಾಡಿ, ಕಕ್ಷಿದಾರರು ಬಹಳ ವರ್ಷ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ತಮ್ಮ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರೆ ಹಣ ಹಾಗೂ ಸಮಯ ಎರಡೂ ಉಳಿತಾಯವಾಗುತ್ತದೆ. ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಸಾಯಬಣ್ಣ ಹಾಗರಗಿ ಮಾತನಾಡಿ, ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಂಡು ಪರಸ್ಪರ ಸೌಹಾರ್ದತೆಯಿಂದ ಸಮಾಜದಲ್ಲಿ ಜೀವನ ಸಾಗಿಸಬೇಕೆಂದು ಸಲಹೆ ನೀಡಿದರು.ಈ ರಾಷ್ಟ್ರೀಯ ಜನತಾ ನ್ಯಾಯಾಲಯದ ಯಶಸ್ವಿಗೆ ಎಲ್ಲಾ ವಕೀಲರು, ಕಕ್ಷಿದಾರರು ಹಾಗೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಉತ್ತಮವಾಗಿ ಸಹಕರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.