ಕನ್ನಡಪ್ರಭ ವಾರ್ತೆ ಪುತ್ತೂರು
ಧರ್ಮಗಳು ಬದುಕನ್ನು ಕಲಿಸುತ್ತದೆ. ನಾವು ಹೇಗೆ ಜೀವನ ನಡೆಸಬೇಕು, ಹೇಗೆ ಸಮಾಜದಲ್ಲಿ ಇರಬೇಕು ಎಂಬುದನ್ನು ಧರ್ಮ ನಮಗೆ ಕಲಿಸುತ್ತದೆ. ಆ ಪ್ರಕಾರ ನಾವು ಬದುಕು ನಡೆಸಿದರೆ, ನಾವು ಎಲ್ಲರ ಸಂಪ್ರೀತಿಗೆ ಪಾತ್ರರಾಗಲು ಸಾಧ್ಯವಾಗುತ್ತದೆ ಎಂದರು.ಸರ್ಕಾರ ಪಂಚ ಗ್ಯಾರಂಟಿ ಯೋಜನೆಯನ್ನು ಮಹಿಳೆಯರಿಗೆ ನೀಡಿದೆ. ಯಾಕೆಂದರೆ ಮಹಿಳೆ ಕುಟುಂಬದ ಆಧಾರ ಸ್ತಂಭ. ಮಹಿಳೆ ಕುಟುಂಬವನ್ನು ನಡೆಸುವ ದೇವಿಯಾಗಿದ್ದಾಳೆ. ಈ ಕಾರಣಕ್ಕೆ ಸರ್ಕಾರ ಮಹಿಳೆಯರಿಗೆ ಗೌರವ ನೀಡುವ ಉದ್ದೇಶದಿಂದ ಗ್ಯಾರಂಟಿಯನ್ನು ನೀಡಿದೆ. ಗ್ಯಾರಂಟಿ ಯೋಜನೆಗಳು ಮಹಿಳೆಗೆ ಕೊಟ್ಟ ಕಾರಣ ಇಂದು ಸಾವಿರಾರು ಕುಟುಂಬಗಳು ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ಹೇಳಿದರು.
ಶಾರದೋತ್ಸವ ಸಮಿತಿ ಅಧ್ಯಕ್ಷ ಅಮಲರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಗೌರವಾಧ್ಯಕ್ಷ ವಸಂತಕುಮಾರ್, ವೆಂಕಟ್ರಮಣ ಆಚಾರ್ಯ, ಪವನ್ ಕುಮಾರ್, ಲಕ್ಷ್ಮಣ ಗೌಡ ಕುಂಟಿಕಾನ, ತೀರ್ತಾನಂದ ಗೌಡ ದುಗ್ಗಳ ಉಪಸ್ಥಿತರಿದ್ದರು.ಸಮಿತಿ ಗೌರವಾಧ್ಯಕ್ಷ ಪ್ರಮೋದ್ ಕೆ.ಎಸ್. ಸ್ವಾಗತಿಸಿದರು. ವಿನೋದ್ ರೈ ಕೊಳ್ತಿಗೆ ಕಾರ್ಯಕ್ರಮ ನಿರೂಪಿಸಿದರು.