ದಾಬಸ್ಪೇಟೆ : ಸೋಂಪುರ ಹೋಬಳಿಯ ರಾಯರಪಾಳ್ಯ ಗ್ರಾಮದ, ಎಸ್.ಆರ್.ಎಸ್.ಇಟ್ಟಿಗೆ ಕಾರ್ಖಾನೆಯಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿದೆ.
ಇಟ್ಟಿಗೆ ಕಾರ್ಖಾನೆ ಮಾಲೀಕ ಪ್ರತಾಪ್ ಮಾತನಾಡಿ, ಕಳೆದ ವರ್ಷವು ಇಟ್ಟಿಗೆ ಕಾರ್ಖಾನೆ ಪಕ್ಕದ ರಾಮದೇವರ ಬೆಟ್ಟದಲ್ಲಿ ಹೆಬ್ಬಾವು ಕಂಡಿತ್ತು, ಇದೀಗ ಕಾರ್ಖಾನೆಯಲ್ಲಿದ್ದ ನಾಯಿ ಮರಿಹಾಕಿದ್ದು, ಮರಿ ತಿನ್ನಲು ಆಗಮಿಸಿದೆ, ಅಪರೂಪದ ಹೆಬ್ಬಾವು ಕಂಡು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದು, ಹೆಬ್ಬಾವು ಬಯಲು ಸೀಮೆಯಲ್ಲಿ ಕಂಡಿದ್ದು ಅಪರೂಪವಾಗಿದೆ ಎಂದರು.
ಉರಗ ರಕ್ಷಕ ಸ್ನೇಕ್ ಶ್ಯಾಮ್ ಮಾತನಾಡಿ, ಬಯಲು ಸೀಮೆ ಪ್ರಾಂತ್ಯದಲ್ಲಿ ಹೆಬ್ಬಾವು ಕಾಣಿಸುವುದು ಅಪರೂಪ, ಕಾರ್ಖಾನೆ ಪಕ್ಕದ ರಾಮದೇವರ ಬೆಟ್ಟದಲ್ಲಿ ಈ ಹಾವು ವಾಸವಾಗಿರಬಹುದು, ಕಳೆದ 10 ವರ್ಷಗಳಿಂದ ಉರಗ ರಕ್ಷಣೆ ಮಾಡುತ್ತಿದ್ದೇವೆ, ನಮ್ಮ ತಂಡದಿಂದ 20ಕ್ಕೂ ಅಧಿಕ ಹೆಬ್ಬಾವು ರಕ್ಷಿಸಿದ್ದೇವೆ, ವರ್ಕಾಂ ಎಂಬ ಎನ್.ಜಿ.ಓ ಅಡಿ, ಉರಗ ರಕ್ಷಣೆ ಮಾಡುತ್ತಿದ್ದೇವೆ, ಉರಗಗಳಿಗೆ ಆತಂಕ ಪಡದೇ ಎಚ್ಚರಿಕೆಯಿಂದ ಇದ್ದರೇ, ಹಾವುಗಳನ್ನು ಸಂರಕ್ಷಿಸಬಹುದು ಎಂದರು. ಈ ವೇಳೆ ಉರಗ ತಜ್ಞರಾದ ಮನು ಅಗ್ನಿ, ಚೇತನ್ ಅಗ್ನಿ ಸೇರಿದಂತೆ ಗ್ರಾಮಸ್ಥರಿದ್ದರು.ಫೋಟೋ 5 :
ಪೋಟೋ 6 :
ಇಟ್ಟಿಗೆ ಕಾರ್ಖಾನೆಯಲ್ಲಿದ್ದ ಹೆಬ್ಬಾವು