)
ಮಡಿಕೇರಿ: ಕೊಡಗು ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2025ನೇ ವರ್ಷದ ಅತ್ಯುತ್ತಮ ವರದಿಗಳಿಗಾಗಿನ ಪ್ರಶಸ್ತಿಗಳು ಘೋಷಣೆಯಾಗಿದೆ.
ಕೊಡಗು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರು ತಮ್ಮ ಪೋಷಕರಾದ ದಿ. ಮೀರಾ ಕಾಮತ್ ಮತ್ತು ದಿ. ಎಂ.ಜಿ. ಪದ್ಮನಾಭ ಕಾಮತ್ ಅವರ ಹೆಸರಿನಲ್ಲಿ ಸ್ಥಾಪಿಸಿರುವ ದೖಶ್ಯ ವಾಹಿನಿಯಲ್ಲಿ ಪ್ರಸಾರವಾದ ಅತ್ಯುತ್ತಮ ಮಾನವೀಯ ವರದಿಗಾಗಿನ ಪ್ರಶಸ್ತಿಯು ಕೊಡಗು ಚಾನಲ್ ಮಾಧ್ಯಮದಲ್ಲಿ ಪ್ರಸಾರವಾದ ‘ರಸ್ತೆಗಾಗಿ ಅಂಗಲಾಚುತ್ತಿದೆ ವಿಕಲಚೇತನ ಕುಟುಂಬ’ ಶೀರ್ಷಿಕೆಯ ವರದಿಗಾಗಿ ಟಿ.ಜೆ. ಪ್ರವೀಣ್ ಕುಮಾರ್ ಅವರಿಗೆ ಸಂದಿದೆ.ತಿಪಟೂರಿನ ಕೆ.ಎಂ. ಭಾಗೀರಥಿ ಮಹಂತೇಶ್ ಅವರು ಹಿರಿಯ ಪತ್ರಕರ್ತ ಕೆ.ಬಿ. ಮಹಾಂತೇಷ್ ಅವರ ಸ್ಮರಣಾರ್ಥ ಸ್ಫಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗಾಗಿನ ದತ್ತಿ ಪ್ರಶಸ್ತಿಯು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಐಸ್ ಹಾಕಿಯಲ್ಲಿ ವಿದ್ಯಾರ್ಥಿನಿ ಆರ್ಯ ಛಾಪು’ ಎಂಬ ಶೀರ್ಷಿಕೆಯ ವರದಿಗಾಗಿ ಸೋಮವಾರಪೇಟೆಯ ಡಿ.ಪಿ. ಲೋಕೇಶ್ ಅವರಿಗೆ ಸಂದಿದೆ.ವಿರಾಜಪೇಟೆಯ ಸಮಾಜ ಸೇವಕರಾದ ಮನೆಯಪಂಡ ಕಾಂತಿ ಸತೀಶ್ ಅವರು ಅತ್ಯುತ್ತಮ ಕೃಷಿ ವರದಿಗೆ ನೀಡಿರುವ ದತ್ತಿ ನಿಧಿ ಪ್ರಶಸ್ತಿ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘57 ತಳಿಯ ಭತ್ತ ನಾಟಿ-ಮಾದರಿಯಾದ ಹೊದೂರು ಗ್ರಾಮದ ರೈತ ರವಿಶಂಕರ್’ ಎಂಬ ಶೀರ್ಷಿಕೆಯ ವರದಿಗಾಗಿ ನಿನೋದ್ ಮೂಡಗದ್ದೆ ಅವರಿಗೆ ಸಂದಿದೆ.ಗುಡ್ಡೆಹೂಸೂರಿನ ಹಿರಿಯ ಛಾಯಾಗ್ರಾಹಕರಾದ ಗುಡ್ಡೆಮನೆ ವಿಶು ಕುಮಾರ್ ಅವರು ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿಗಾಗಿನ ಪ್ರಶಸ್ತಿಯು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಸೂರಿಗಾಗಿ ವೃದ್ಧೆಯ ಪ್ರಾರ್ಥನೆ’ ಶೀರ್ಷಿಕೆಯ ವರದಿಗಾಗಿ ಸುಂಟಿಕೊಪ್ಪದ ಸುನೀಲ್ ಎಂ.ಎಸ್. ಅವರಿಗೆ ಸಂದಿದೆ.
ಜು.1ರಂದು ಮಡಿಕೇರಿಯ ಪತ್ರಿಕಾಭವನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ನೆಲ್ಯಹುದಿಕೇರಿಯ ಗ್ರಾಪಂ ಮಾಜಿ ಅಧ್ಯಕ್ಷ, ಸಮಾಜ ಸೇವಕ ಸಾಬು ವಗೀ೯ಸ್, ಪ್ರಶಸ್ತಿ ಪ್ರದಾನ ಮಾಡುವರು. ಸಂಘದ ಜಿಲ್ಲಾಧ್ಯಕ್ಷ ಅನಿಲ್ ಎಚ್.ಟಿ., ಕೊಡಗು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಸಂಘದ ಖಜಾಂಚಿ ಟಿ.ಕೆ. ಸಂತೋಷ್, ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ. ಮುರಳೀಧರ್, ಕ್ಷೇಮಾಭಿವೖದ್ದಿ ಸಮಿತಿ ಅಧ್ಯಕ್ಷ ಜಿ.ವಿ. ರವಿ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಮಾಹಿತಿ ನೀಡಿದ್ದಾರೆ.