ರಾಮನಗರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು ಪೂರ್ವ ಮುಂಗಾರಿನಲ್ಲಿ ಶೇ. 82.87ರಷ್ಟು ಬಿತ್ತನೆ ಮಾಡಿದ್ದಾರೆ.
ಕಳೆದ ವರ್ಷ ಬಿತ್ತನೆ ಇಲ್ಲದ ಕಾರಣ ರೈತರು ಬಿತ್ತನೆ ಬೀಜವನ್ನು ಮನೆಯಲ್ಲೇ ಸಂಗ್ರಹಿಸಿ ಇಟ್ಟುಕೊಂಡಿದ್ದರು. ಈಗ ಬಿತ್ತನೆಗೆ ಸಕಾಲವಾಗಿದ್ದು, ಹಳ್ಳಿಗಳಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಮುಂಗಾರು ಬಿತ್ತನೆಗೂ ಮೊದಲು ಅಲ್ಪಾವಧಿಯಲ್ಲಿ ಬರುವ ದ್ವಿದಳ ಧಾನ್ಯಗಳ ಬಿತ್ತನೆ ಎಲ್ಲಡೆ ನಡೆಯುತ್ತಿದೆ.
ಎಳ್ಳು, ಅಲಸಂದೆ, ತೊಗರಿ ಬಿತ್ತನೆ ಭರದಿಂದ ಸಾಗಿದೆ. ಕಳೆದೊಂದು ವರ್ಷದಿಂದ ಹೊಲ ಉಳುಮೆ ಮಾಡಲು ಸಾಧ್ಯವಾಗಿರಲಿಲ್ಲ. ಹಲವರು ಮೊದಲು ಹೊಲ ಉಳುಮೆಗೆ ಆದ್ಯತೆ ನೀಡಿದ್ದಾರೆ. ಬಹುತೇಕ ರೈತರು ಹೊಲ ಹಸನು ಮಾಡುವತ್ತ ಚಿತ್ತ ಹರಿಸಿದ್ದಾರೆ. ಇನ್ನೂ ಕೆಲವರು ಮೊದಲು ಬಿತ್ತನೆ ಮಾಡಿ ನಂತರ ಉಳುಮೆ ಮಾಡುತ್ತಿದ್ದಾರೆ.ಮಳೆಯಾಶ್ರಿತ ಪ್ರದೇಶವಾಗಿರುವ ಕಾರಣ ರೈತರಿಗೆ ಪೂರ್ವ ಮುಂಗಾರು ಬಿತ್ತನೆ ಕೊಂಚ ತಡವಾಗಿದೆ ಎಂಬ ಕೊರಗಿದೆ. ಹಿನ್ನಡೆಯಾದರೂ ಸರಿ, ಬಿತ್ತನೆ ನಿಲ್ಲಿಸಬಾರದು ಎಂಬ ಕಾರಣದಿಂದ ಬಿತ್ತನೆ ಮುಂದುವರಿಸಿದ್ದಾರೆ.
ಈಗಷ್ಟೇ ಬಿತ್ತನೆ ಆರಂಭವಾಗಿದ್ದು ಒಟ್ಟಾರೆ ಗುರಿಯಲ್ಲಿ ಉತ್ತಮ ಸಾಧನೆಯಾಗಿದೆ. 1670 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇಟ್ಟುಕೊಳ್ಳಲಾಗಿದ್ದು, ಇಲ್ಲಿವರೆಗೆ 1384 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿ ಶೇ.82.87ರಷ್ಟು ಗುರಿ ಸಾಧಿಸಲಾಗಿದೆ. ಇದೇ ವರ್ಷ ಮೇ 13ರಂದು ಬಿತ್ತನೆ ಕಾರ್ಯದಲ್ಲಿ ಶೂನ್ಯ ಸಾಧನೆ ಆಗಿತ್ತು.
ಶೇ.3 ರಷ್ಟು ಮಳೆ ಕೊರತೆ:
ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ವರುಣ ಕೃಪೆಯನ್ನೇ ತೋರಿಲ್ಲ. ಏಪ್ರಿಲ್ ನಲ್ಲಿ ಶೇ. 93ರಷ್ಟು ಮಳೆ ಕೊರತೆ ಉಂಟಾಗಿದೆ. ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ 16.8ಮಿ.ಮೀ. ಮಳೆಯಾಗಿದ್ದರೆ, ಈ ಬಾರಿ ಶೇ.100ರಷ್ಟು ಮಳೆ ಅಭಾವ ಕಂಡಿದೆ. ಮೇ ತಿಂಗಳಲ್ಲಿ ಶೇ.27 ರಷ್ಟು ಮಳೆ ಆಗಿದೆ. 109 ಮಿ.ಮೀ ಪೈಕಿ 138 ಮಿ.ಮೀ ನಷ್ಟು ಮಳೆಯಾಗಿದೆ. ಜೂನ್ 1 ರಿಂದ 14ರವರೆಗೆ 47 ಮಿ.ಮೀ ಪೈಕಿ 75 ಮಿ.ಮೀ.ನಷ್ಟು (ಶೇ.58) ಮಳೆ ಆಗಿದೆ.
ಬಾಕ್ಸ್............
ವಾಡಿಕೆ ಮಳ.
ಶೇಕಡವಾರುಚನ್ನಪಟ್ಟ.
229..212..
- 7ಕನಕಪು.237..
178..- 25ಮಾಗಡ.
258..281..
9ರಾಮನಗ.225..
279..24ಹಾರೋಹಳ್ಳ.
219..139..
- 36 ಒಟ್ಟ.22.
21.- 3ಬಾಕ್ಸ್.........ಪೂರ್ವ ಮುಂಗಾರು ಬೆಳೆ ವಿವರ (ಹೆಕ್ಟೇರ್ಗಳಲ್ಲಿ)ಬೆಳೆಗಳ.
ರಾಮನಗ.ಚನ್ನಪಟ್ಟ.
ಕನಕಪು.ಮಾಗಡ.
ಒಟ್ಟುಎಳ್ಳ.0.
6.84.
0.900 ಅಲಸಂದ.
5.12.
0.18.
118ತೊಗರ.1.
0.0.
12.130 ಒಟ್ಟ.
6.18.
84.30.
138418ಕೆಆರ್ ಎಂಎನ್ 1.ಜೆಪಿಜಿ
ರೈತರು ಬಿತ್ತನೆ ಕಾರ್ಯಕ್ಕೆ ಭೂಮಿ ಹದಗೊಳಿಸುತ್ತಿರುವುದು (ಸಂಗ್ರಹ ಚಿತ್ರ)