ಶ್ರೀಗಳ ಜನ್ಮ ದಿನಾಚರಣೆ ಪ್ರಯುಕ್ತ ಸೋಮವಾರ ಬೆಳಗ್ಗೆ 8ಕ್ಕೆ ಶ್ರೀ ದತ್ತ ವೆಂಕಟೇಶ್ವರ ದೇವಸ್ಥಾನದಲ್ಲಿ ಸ್ವಾಮಿಗೆ ರುದ್ರ ಹೋಮ, ಆಯುಷ್ಯ ಹೋಮ, ರುದ್ರ ಅಭಿಷೇಕ ನೆರವೇರಿಸಲಾಯಿತು.
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಅವಧೂತ ದತ್ತ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 83ನೇ ಜನ್ಮ ದಿನವನ್ನು ಸೋಮವಾರ ವಿಶೇಷವಾಗಿ ಆಚರಿಸಲಾಯಿತು.ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಜನುಮ ದಿನದ ಅಂಗವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ನಾಣ್ಯಗಳನ್ನು ಬಿಡುಗಡೆ ಮಾಡಿ ಗೌರವ ಸಮರ್ಪಿಸಿದೆ. ಆರ್ ಬಿಐ ಹೈದರಾಬಾದ್ ಶಾಖೆಯ ವ್ಯವಸ್ಥಾಪಕಿ ಪಿ. ವಿಜಯಲಕ್ಷ್ಮಿ ಅವರು ನಾಣ್ಯಗಳನ್ನು ಶ್ರೀಗಳಿಗೆ ಸಮರ್ಪಿಸಿದರು.ಶ್ರೀಗಳ ಜನ್ಮ ದಿನಾಚರಣೆ ಪ್ರಯುಕ್ತ ಸೋಮವಾರ ಬೆಳಗ್ಗೆ 8ಕ್ಕೆ ಶ್ರೀ ದತ್ತ ವೆಂಕಟೇಶ್ವರ ದೇವಸ್ಥಾನದಲ್ಲಿ ಸ್ವಾಮಿಗೆ ರುದ್ರ ಹೋಮ, ಆಯುಷ್ಯ ಹೋಮ, ರುದ್ರ ಅಭಿಷೇಕ ನೆರವೇರಿಸಲಾಯಿತು. ನಂತರ ಗಣಪತಿ ಶ್ರೀಗಳನ್ನು ಅಲಂಕೃತ ಸಾರೋಟ್ ನಲ್ಲಿ ಪ್ರಾರ್ಥನಾ ಮಂದಿರದಿಂದ ನಾದಮಂಟಪದವರೆಗೆ ಮೆರವಣಿಗೆಯಲ್ಲಿ ಕರೆ ತರಲಾಯಿತು.ನಾದ ಮಂಟಪದಲ್ಲಿ ಶ್ರೀ ಚಕ್ರ ಪೂಜೆ ನೆರವೇರಿಸಿ, ನಂತರ ಗಣಪತಿ ಶ್ರೀಗಳಿಗೆ ಪ್ರತ್ಯಕ್ಷ ಪಾದ ಪೂಜೆಯನ್ನು ಅವಧೂತ ದತ್ತಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ನೆರವೇರಿಸಿ, ಪುಷ್ಪ ನಮನ ಸಲ್ಲಿಸಿದರು. ಬಳಿಕ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿದರು. ವಿವಿಧ ಬಿರುದು ಪ್ರದಾನಪಾದಪೂಜೆ ನಂತರ ಚೈತನ್ಯ ಅರ್ಚನ- ದತ್ತ ಪೀಠದ ಬಿರುದು ಪ್ರದಾನ ಮಾಡಲಾಯಿತು. ವೇದ ನಿಧಿ- ವಿಷ್ಣುಭಟ್ಲ ಲಕ್ಷ್ಮೀನಾರಾಯಣ ಘನಪಾಠಿ, ಶಾಸ್ತ್ರ ನಿಧಿ- ಕುಪ್ಪ ವಿಶ್ವನಾಥ ಶಾಸ್ತ್ರಿ, ನಾದ ನಿಧಿ- ಪಂ. ವಿನಾಯಕ ತೊರವಿ, ನಾದ ನಿಧಿ- ವಿದ್ವಾನ್ ಶಶಾಂಕ್ ಸುಬ್ರಮಣ್ಯಂ, ನಾಟ್ಯ ನಿಧಿ- ವಿದುಷಿ ಟಿ.ಎಸ್. ಶ್ರೀಲಕ್ಷ್ಮಿ, ಆಸ್ಥಾನ ಶಿಲ್ಪಿ- ಕೃಷ್ಣಮೂರ್ತಿ, ಜಯಲಕ್ಷ್ಮಿ ಪುರಸ್ಕಾರ- ಗಂಗಾವರಂ ವೇದಾವತಿ ಮತ್ತು ಗೀತಾ ಪುಂಜಾಲ, ದತ್ತ ಪೀಠ ಬಂಧು- ಕಮಲ್ ಕಪೂರ್, ಸಂಪತ್ ಕುಮಾರ್ ಆಚಾರ್, ಕಂಟೇಟಿ ಶ್ರೀನಿವಾಸ್ ಮತ್ತು ಮೈಸೂರಿನ ಎಸ್. ನಾಗರಾಜ್, ಸಸ್ಯ ಬಂಧು- ಸುಚಿತಾ ರೆಡ್ಡಿ ಅವರಿಗೆ ಬಿರುದು ಪ್ರದಾನ ಮಾಡಿ ಶ್ರೀಗಳು ಆಶೀರ್ವದಿಸಿದರು.ಇದೇ ಮೊದಲ ಬಾರಿಗೆ ಶ್ರೀಗಳು ನಾಟ್ಯನಿಧಿ ಪ್ರಶಸ್ತಿಯನ್ನು ಕೂಡಾ ಪ್ರಾರಂಬಿಸುವ ಮೂಲಕ ತಾವು ಕಲಾ ಪೋಷಕರು ಎಂಬುದನ್ನು ಸಾಬೀತುಪಡಿಸಿದರು.----ಕೋಟ್...ಬೇರೆಯವರಿಗೆ ಅನ್ಯಾಯ ಮಾಡಬಾರದು. ನಾವೆಲ್ಲ ಸನಾತನ ಧರ್ಮವನ್ನು ರಕ್ಷಿಸಬೇಕು, ಧರ್ಮ ಮಾರ್ಗದಲ್ಲಿ ನಡೆಯುವವರನ್ನು ಭಗವಂತ ರಕ್ಷಿಸುತ್ತಾನೆ, ಅಧರ್ಮ ಮಾಡುವವರನ್ನ ಶಿಕ್ಷಿಸುತ್ತಾನೆ. ಎಲ್ಲರಿಗೂ ಒಳಿತಾಗಲಿದೆ. ನಿನ್ನೆಯಷ್ಟೇ ಭಾರತ ಸೇನೆಗೆ 25 ಲಕ್ಷ ಕಾಣಿಕೆ ಸಮರ್ಪಿಸಿದ್ದೇವೆ, ಕಷ್ಟಗಳು ಬರುತ್ತವೆ ಹಾಗೇ ಹೋಗುತ್ತದೆ. ಆ ಭಗವಂತನನ್ನ ನಂಬಿ ಪ್ರಾರ್ಥಿಸಿದರೆ ಎಲ್ಲವೂ ಪರಿಹಾರವಾಗುತ್ತದೆ.- ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಅವಧೂತ ದತ್ತ ಪೀಠ
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.