ಕುಡಿಯುವ ನೀರು ಪೂರೈಕೆಗಾಗಿ₹90 ಕೋಟಿ ಮೀಸಲು: ತುಷಾರ್‌

KannadaprabhaNewsNetwork |  
Published : Feb 06, 2024, 01:30 AM IST
ನೀರು | Kannada Prabha

ಸಾರಾಂಶ

ಬೆಂಗಳೂರಿನ ಸುತ್ತಲಿನ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿದ ಬಿಬಿಎಂಪಿಯು 90 ಕೋಟಿಯನ್ನು ಮೀಸಲಿರಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಿರಲು 110 ಹಳ್ಳಿಗಳು ಸೇರಿದಂತೆ ಹೊಸದಾಗಿ ಬಿಬಿಎಂಪಿಗೆ ಸೇರ್ಪಡೆಯಾದ ಪ್ರದೇಶಗಳಲ್ಲಿ ನೀರು ಪೂರೈಸಲು ₹90 ಕೋಟಿ ವ್ಯಯಿಸಲು ಉದ್ದೇಶಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 110 ಹಳ್ಳಿ ಸೇರಿದಂತೆ ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾದ ಪ್ರದೇಶಗಳಿಗೆ ಬಿಬಿಎಂಪಿಯಿಂದಲೇ ಕುಡಿಯುವ ನೀರು ಪೂರೈಸಲಾಗುವುದು. ಉಳಿದ ಪ್ರದೇಶಗಳಲ್ಲಿ ಜಲಮಂಡಳಿಯಿಂದ ನೀರು ಪೂರೈಕೆ ಮಾಡಲಾಗುವುದು. ಅದಕ್ಕಾಗಿ ನಗರ ಪ್ರದೇಶದಲ್ಲಿನ ಎಲ್ಲ ಕೊಳವೆಬಾವಿಗಳನ್ನು ಈಗಾಗಲೇ ಜಲಮಂಡಳಿಗೆ ವಹಿಸಲಾಗಿದೆ. ಇದಕ್ಕಾಗಿ ಜಲಮಂಡಳಿಗಾಗಿ ಬಿಬಿಎಂಪಿಯಿಂದ ₹8 ಕೋಟಿ ನೀಡಲಾಗುತ್ತಿದೆ ಎಂದರು.

ನೀರು ಪೂರೈಸಲು ₹90 ಕೋಟಿ ಮೀಸಲಾಗಿದೆ. ಈ ಪೈಕಿ ₹50 ಕೋಟಿಗಳನ್ನು ಕೊಳವೆಬಾವಿ ದುರಸ್ತಿ ಸೇರಿದಂತೆ ಹೊಸ ಕೊಳವೆ ಬಾವಿ ಕೊರೆಸಲು ಬಳಸಲಾಗುವುದು. ಉಳಿದ ₹40 ಕೋಟಿಗಳನ್ನು 15ನೇ ಹಣಕಾಸು ಆಯೋಗದಿಂದ ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ