ಕನ್ನಡಪ್ರಭ ವಾರ್ತೆ ಪಾಂಡವಪುರ
ಬಳಿಕ ಮಾತನಾಡಿದ ಅವರು, ವಿಶ್ವೇಶ್ವರಯ್ಯ ನಾಲೆಯ ಸಂಪರ್ಕ ನಾಲೆಯಾದ ಕನಗನಮರಡಿ- ಬನ್ನೂರು ಸಂಪರ್ಕ ನಾಲೆಯೂ ಹಲವಾರು ವರ್ಷಗಳಿಂದ ದುಸ್ಥಿತಿಯಲ್ಲಿತ್ತು. ಹಾಗಾಗಿ ನಾಲೆಯ ಆಧುನೀಕರಣಕ್ಕೆ ೯೦ ಕೋಟಿ ರು.ಅನುದಾನ ಬಿಡುಗಡೆ ಮಾಡಿಸಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ನಾಲೆಯು ೨೭ ಕಿ.ಮೀ. ಇದ್ದು ಪಾಂಡವಪುರ ತಾಲೂಕಿನಲ್ಲಿ ೧೦ ಕಿ.ಮೀ. ಹಾಗೂ ಶ್ರೀರಂಗಪಟ್ಟಣ ತಾಲೂಕಿನಲ್ಲಿ ೧೭ ಕಿ.ಮೀ. ಉದ್ದ ಇರಲಿದೆ. ನಾಲೆ ಆಧುನೀಕರಣದಿಂದ ಈ ಭಾಗದ ೫೩೦೦ ಎಕರೆಗೂ ಅಧಿಕ ಅಚ್ಚುಕಟ್ಟು ಪ್ರದೇಶಕ್ಕೆ ನೀರುಣಿಸಲಿದೆ ಎಂದರು.ನಾಲೆಯ ಆಧುನೀಕರಣದ ಬಗ್ಗೆ ಈಗಾಗಲೆ ನೋಟಿಫಿಕೇಷನ್ ಹೊರಡಿಸಲಾಗಿದೆ, ಜತೆಗೆ ಕಾವೇರಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿಯೇ ಚರ್ಚಿಸಿ ತೀರ್ಮಾನಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ನಾಲೆಯಲ್ಲಿ ಆರು ತಿಂಗಳು ನೀರು ಹರಿಸಲಾಗುತ್ತದೆ ಅಷ್ಟೇ. ಉಳಿದ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಿದ್ಧತೆ ನಡೆಸಿಕೊಂಡು ಭೂಮಿ ಪೂಜೆ ನೆರವೇರಿಸಲಾಗಿದೆ. ಇದರಿಂದ ಕೆಲವು ರೈತರಿಗೆ ಅನುಕೂಲವೂ ಆಗುತ್ತಿದೆ, ಅನಾನೂಕೂಲವೂ ಆಗುತ್ತಿದೆ. ಆದರೆ, ನಾಲೆ ಆಧುನೀಕರಣಗೊಂಡರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರೈತ ಮುಖಂಡರಾದ ಶಿವಣ್ಣೇಗೌಡ, ಬಲರಾಮು, ತಮ್ಮೇಗೌಡ, ಜಗದೀಶ್, ಪ್ರಕಾಶ್, ಡಿ.ಪಿ.ಧರ್ಮರಾಜು, ಶಾಂತಕುಮಾರ್, ಬಸವ, ಕಾಮಗಾರಿಯ ಪ್ರಾಜೆಕ್ಟರ್ ಮೆನೇಜರ್ ವಾಸುದೇವ್, ಮಂಜುನಾಥ್, ಹರ್ಷವರ್ಧನ್ ಸೇರಿದಂತೆ ಹಲವರಿದ್ದರು.