ಬೆಳಗಾವಿ ರಿಂಗ್ ರೋಡ್‌ಗೆ ಶೇ.90ರಷ್ಟು ಭೂಸ್ವಾಧೀನ ಪೂರ್ಣ

KannadaprabhaNewsNetwork |  
Published : Feb 13, 2026, 03:00 AM IST
ಬೆಳಗಾವಿ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆಗೆ  ಶೇ. 90ರಷ್ಟು ಭೂಸ್ವಾಧೀನ ಪೂರ್ಣ ಸಂಸದ ಈರಣ್ಣ ಕಡಾಡಿ | Kannada Prabha

ಸಾರಾಂಶ

ಬೆಳಗಾವಿ ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಕೈಗಾರಿಕಾ ವಲಯಕ್ಕೆ ಬಲ ತುಂಬಲು ಉದ್ದೇಶಿಸಲಾಗಿರುವ 69.42 ಕಿ.ಮೀ ಉದ್ದದ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆಗೆ ಅಗತ್ಯವಿರುವ ಒಟ್ಟು 1,248 ಎಕರೆ ಭೂಮಿಯಲ್ಲಿ ಈಗಾಗಲೇ ಶೇ.90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಯೋಜನೆಯ ಪ್ರಸ್ತುತ ಪ್ರಗತಿಯ ಬಗ್ಗೆ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಕೈಗಾರಿಕಾ ವಲಯಕ್ಕೆ ಬಲ ತುಂಬಲು ಉದ್ದೇಶಿಸಲಾಗಿರುವ 69.42 ಕಿ.ಮೀ ಉದ್ದದ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆಗೆ ಅಗತ್ಯವಿರುವ ಒಟ್ಟು 1,248 ಎಕರೆ ಭೂಮಿಯಲ್ಲಿ ಈಗಾಗಲೇ ಶೇ.90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಯೋಜನೆಯ ಪ್ರಸ್ತುತ ಪ್ರಗತಿಯ ಬಗ್ಗೆ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದರು.

ನವದೆಹಲಿಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ನಗರದ ವರ್ತುಲ ರಸ್ತೆ (ರಿಂಗ್ ರೋಡ್) ಯೋಜನೆಯ ಪ್ರಸ್ತುತ ಸ್ಥಿತಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯೋಜನೆಯ ಒಟ್ಟು ₹1,622 ಕೋಟಿ ಅಂದಾಜು ವೆಚ್ಚದಲ್ಲಿ ಸುಮಾರು 69.42 ಕಿ.ಮೀ ಉದ್ದದ ಈ ವರ್ತುಲ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮೂರು ಪ್ಯಾಕೇಜ್‍ಗಳಲ್ಲಿ ವಿಂಗಡಿಸಿದೆ. ಇದರಲ್ಲಿ ಪ್ಯಾಕೇಜ್-1ಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಉಳಿದ ಎರಡು ಪ್ಯಾಕೇಜ್‍ಗಳ ವಿವರವಾದ ಯೋಜನಾ ವರದಿ (ಡಿ.ಪಿ.ಆರ್) ಅಂತಿಮಗೊಂಡಿದ್ದು, ಶೀಘ್ರದಲ್ಲೇ ಕೇಂದ್ರ ಸರ್ಕಾರದಿಂದ ತಾಂತ್ರಿಕ ಅನುಮೋದನೆ ದೊರೆಯಲಿದೆ.

ಬೆಂಗಳೂರು, ಪುಣೆ ಮತ್ತು ಗೋವಾ ಕಡೆಯಿಂದ ಬರುವ ಭಾರಿ ವಾಹನಗಳು ನಗರದೊಳಗೆ ಪ್ರವೇಶಿಸದೆ ನೇರವಾಗಿ ಹೊರವಲಯದ ಮೂಲಕ ಸಾಗಲು ಈ ರಸ್ತೆ ಅನುವು ಮಾಡಿಕೊಡುತ್ತದೆ. ಹೊನಗಾ, ಮುತಗಾ, ಉಚಗಾಂವ ಸೇರಿದಂತೆ ತಾಲೂಕಿನ 32 ಹಳ್ಳಿಗಳ ಮೂಲಕ ಹಾದುಹೋಗುವ ಈ ಹೆದ್ದಾರಿಯು ಗ್ರಾಮೀಣ ಭಾಗದ ಆರ್ಥಿಕತೆಗೆ ಚೈತನ್ಯ ನೀಡಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ ಪಾಲಿಗೆ ವೈದ್ಯರು ದೇವರಾಗಿ, ರಾಕ್ಷಸರಾಗಬೇಡಿ: ಡಿಸಿ ಸಂಗಪ್ಪ
ನಾಡಿದ್ದು ಸಂತ ಸೇವಾಲಾಲರ 287ನೇ ಜಯಂತ್ಯುತ್ಸವ