ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕಾನೂನು ಜ್ಞಾನ ಇಲ್ಲವಾದಲ್ಲಿ ಕೋರ್ಟ್ ಕಚೇರಿ ಅಲೆದಾಡಬೇಕಾಗುತ್ತದೆ. ಕಾನೂನು ಸೇವೆಗಳ ಪ್ರಾಧಿಕಾರ ದುರ್ಬಲ ವರ್ಗದವರು, ಶೋಷಿತರಿಗೆ ಕಾನೂನು ಅರಿವು ಹಾಗೂ ತಿಳಿವಳಿಕೆ ನೀಡುವ ಕೆಲಸ ಮಾಡುತ್ತಿದೆ ಎಂದರು.ಡೀಸಿ ಡಾ.ಕುಮಾರ ಮಾತನಾಡಿ, ಅಧಿಕಾರಿಗಳು ಕಾನೂನಡಿ ಕರ್ತವ್ಯ ನಿರ್ವಹಿಸುತ್ತಿರುವುದನ್ನು ಮನದಟ್ಟು ಮಾಡಿಕೊಳ್ಳುವ ಜೊತೆಗೆ ಕಾನೂನು ರಕ್ಷಣೆ ಮಾಡಬೇಕು. ಪ್ರಾಧಿಕಾರ ಧ್ವನಿ ಇಲ್ಲದವರಿಗೆ ಧ್ವನಿ ನೀಡುವ ಕಾರ್ಯ ನಿರ್ವಹಿಸುತ್ತಿದೆ. ಕಾನೂನಿನ ನಿಯಮಗಳು ಉಲ್ಲಂಘನೆಗೊಳ್ಳದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಪ್ರಾಧಿಕಾರದಿಂದ ಮಕ್ಕಳು, ಮಹಿಳೆಯರು, ದುರ್ಬಲ ವರ್ಗದವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಉಚಿತವಾಗಿ ಕಾನೂನು ಸೇವೆ ಪಡೆಯಲು ಅವಕಾಶವಿದೆ. ಈ ಬಗ್ಗೆ ಅರಿವು ಮೂಡಿಸಲು ವಿಶೇಷ ಶಿಬಿರ ಆಯೋಜಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಕ್ರಿಮಿನಲ್, ಸಿವಿಲ್ ಹಾಗೂ ಅರೆ ನ್ಯಾಯಾಲಯಗಳಲ್ಲೂ ಕೂಡ ಸೇವೆ ಪಡೆಯಬಹುದು ಎಂದರು.
ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಅಪರ ಪೊಲೀಸ್ ಅಧೀಕ್ಷಕ ಗಂಗಾಧರ್ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.