ಚನ್ನರಾಯಪಟ್ಟಣದಲ್ಲಿ 920 ಗ್ರಾಂ ಗಾಂಜಾ ವಶ

KannadaprabhaNewsNetwork |  
Published : Oct 21, 2024, 12:33 AM IST
20ಎಚ್ಎಸ್ಎನ್17 :  | Kannada Prabha

ಸಾರಾಂಶ

ಮನೆಯೊಂದರಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಸುಮಾರು ೯೨೦ ಗ್ರಾಂ ಗಾಂಜಾವನ್ನು ಅಬಕಾರಿ ಇಲಾಖೆಯವರು ವಶಪಡಿಸಿಕೊಂಡಿದ್ದಾರೆ. ಮಂಜುನಾಥ ನಗರದ ಸಾಯಿಬಾಬ ದೇವಸ್ಥಾನದ ಹತ್ತಿರ ವಾಸದ ಮನೆಯಲ್ಲಿ ಬಾಡಿಗೆ ಇದ್ದುಕೊಂಡು, ಒಣ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಅಕ್ರಮವಾಗಿ ಗಾಂಜಾವನ್ನು ಇಟ್ಟಿದ್ದು ಖಚಿತ ಮಾಹಿತಿ ಮೇರೆಗೆ ಮನೆಯ ಮೇಲೆ ದಾಳಿ ಮಾಡಿದ ಅಬಕಾರಿ ಇಲಾಖೆ ಸಿಬ್ಬಂದಿ ಆರೋಪಿತನನ್ನು ದಸ್ತಗಿರಿ ಮಾಡಿ ದೊರೆತ ಮಾಲನ್ನು ಇಲಾಖೆ ವಶಕ್ಕೆ ಪಡೆದುಕೊಂಡು ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಮನೆಯೊಂದರಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಸುಮಾರು ೯೨೦ ಗ್ರಾಂ ಗಾಂಜಾವನ್ನು ಅಬಕಾರಿ ಇಲಾಖೆಯವರು ವಶಪಡಿಸಿಕೊಂಡಿದ್ದಾರೆ.

ಮಂಡ್ಯ ಮೂಲದ ಅರೋಪಿ ವೆಂಕಟೇಶ್‌ಗೌಡ ಬಿನ್ ಉಮೇಶ್ (೨೭) ಎಂಬಾತ ಪಟ್ಟಣದ ಸಿ. ಎನ್. ಮಂಜುನಾಥ ನಗರದ ಸಾಯಿಬಾಬ ದೇವಸ್ಥಾನದ ಹತ್ತಿರ ವಾಸದ ಮನೆಯಲ್ಲಿ ಬಾಡಿಗೆ ಇದ್ದುಕೊಂಡು, ಒಣ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಅಕ್ರಮವಾಗಿ ಗಾಂಜಾವನ್ನು ಇಟ್ಟಿದ್ದು ಖಚಿತ ಮಾಹಿತಿ ಮೇರೆಗೆ ಮನೆಯ ಮೇಲೆ ದಾಳಿ ಮಾಡಿದ ಅಬಕಾರಿ ಇಲಾಖೆ ಸಿಬ್ಬಂದಿ ಆರೋಪಿತನನ್ನು ದಸ್ತಗಿರಿ ಮಾಡಿ ದೊರೆತ ಮಾಲನ್ನು ಇಲಾಖೆ ವಶಕ್ಕೆ ಪಡೆದುಕೊಂಡು ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.ಈ ಕಾರ್ಯಾಚರಣೆಯಲ್ಲಿ ಚನ್ನರಾಯಪಟ್ಟಣ ವಲಯದ ಅಬಕಾರಿ ನಿರೀಕ್ಷಕರಾದ ನೂರ್‌ಜಹರಾ ಎನ್.ಐ., ಅಬಕಾರಿ ಉಪ ನಿರೀಕ್ಷಕರಾದ ರೂಪ ವಿ.ಕೆ, ಮತ್ತು ಅಬ್ದುಲ್ ನಿಸಾರ್ ಎಚ್.ಎ. ಹಾಗೂ ಸಿಬ್ಬಂದಿ ಅಬಕಾರಿ ಮುಖ್ಯ ಪೇದೆ ವೀರಭದ್ರ ಕೆ., ಅಬಕಾರಿ ಮುಖ್ಯ ಪೇದೆ ಅಭಿಲಾಷ ಕೆ., ಅಬಕಾರಿ ಪೇದೆ ಪ್ರದೀಪ ಜಿ.ಎಂ, ಅಬಕಾರಿ ಪೇದೆ ಶಿವಕುಮಾರ್ ಬಿ.ಆರ್‌. ಮತ್ತು ವಾಹನ ಚಾಲಕರಾದ ರಾಜೇಶ್ ಕೆ.ಜೆ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ