ಶಿಗ್ಗಾಂವಿ ತಾಲೂಕಿನಲ್ಲಿ ಶೇ. 93ರಷ್ಟು ಬಿತ್ತನೆ: ಕೊಟ್ರೇಶ ಗೆಜ್ಲಿ

KannadaprabhaNewsNetwork |  
Published : Jun 28, 2025, 12:28 AM IST
ಪೊಟೋ ಪೈಲ್ ನೇಮ್ ೨೭ಎಸ್‌ಜಿವಿ೧    ತಾಲೂಕು ಕೃಷಿಕ ಸಮಾಜದ ಅದ್ಯಕ್ಷ ಹನಮರೆಡ್ಡಿ ನಡುವಿನಮನಿ ಯವರು  ಶ್ರೀ ಸ್ವಾಮಿ ವಿವೇಕಾನಂದ ಪ್ರೌಡಶಾಲೆ (ಅರಟಾಳ) ದುಂಡಶಿ ಶಾಲೆಗೆ ನೂತನವಾಗಿ ಅಧ್ಯಕ್ಷರಾದ ಹಿನ್ನೇಲೆಯಲ್ಲಿ ತಾಲೂಕಾ  ಕೃಷಿಕ ಸಮಾಜದ ಎಲ್ಲಾ ಪದಾಧಿಕಾರಿಗಳಿಂದ ಸನ್ಮಾನಿಸಿ ಗೌರವಿಸಲಾಯಿತು.  | Kannada Prabha

ಸಾರಾಂಶ

ಶೇ. ೯೩ರಷ್ಟು ಬಿತ್ತನೆ ಕಾರ್ಯವಾಗಿದ್ದು, ಮಳೆಯ ಪ್ರಮಾಣ ಕಡಿಮೆಯಾದ ನಂತರ ಅಂತರ ಬೇಸಾಯ ಮತ್ತು ಕಳೆ ತೆಗೆಯುವ ಕೆಲಸವನ್ನು ಕೈಗೊಂಡು ಮೇಲುಗೊಬ್ಬರವಾಗಿ ಶಿಫಾರಸ್ಸಿನಂತೆ ಯೂರಿಯಾ ರಸಗೊಬ್ಬರವನ್ನು ಮಿತವಾಗಿ ಬಳಕೆ ಮಾಡಬೇಕು.

ಶಿಗ್ಗಾಂವಿ: ತಾಲೂಕಿನಲ್ಲಿ ಜೂನ್ ತಿಂಗಳಲ್ಲಿ ಸರಾಸರಿ ೧೦೬.೧ ಮಿಮೀ ಮಳೆ ಪೈಕಿ ೧೨೯.೭ ಮಿಮೀ ಮಳೆಯಾಗಿದೆ. ಶೇ. ೨೨ರಷ್ಟು ಮಳೆಪ್ರಮಾಣ ಹೆಚ್ಚಾಗಿದ್ದು, ರೈತರು ಹೊಲಗಳಲ್ಲಿ ನಿಂತಿರುವ ನೀರನ್ನು ಬಸಿಕಾಲುವೆಗಳ ಮುಖಾಂತರ ಬಸಿದು ಹೋಗುವಂತೆ ಕ್ರಮ ವಹಿಸಬೇಕು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಕೊಟ್ರೇಶ ಗೆಜ್ಲಿ ತಿಳಿಸಿದರು.ತಾಲೂಕು ಕೃಷಿಕ ಸಮಾಜ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಶೇ. ೯೩ರಷ್ಟು ಬಿತ್ತನೆ ಕಾರ್ಯವಾಗಿದ್ದು, ಮಳೆಯ ಪ್ರಮಾಣ ಕಡಿಮೆಯಾದ ನಂತರ ಅಂತರ ಬೇಸಾಯ ಮತ್ತು ಕಳೆ ತೆಗೆಯುವ ಕೆಲಸವನ್ನು ಕೈಗೊಂಡು ಮೇಲುಗೊಬ್ಬರವಾಗಿ ಶಿಫಾರಸ್ಸಿನಂತೆ ಯೂರಿಯಾ ರಸಗೊಬ್ಬರವನ್ನು ಮಿತವಾಗಿ ಬಳಕೆ ಮಾಡಬೇಕು ಎಂದರು.

ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ೨೫ರಿಂದ ೩೦ ದಿನಗಳ ಬೆಳೆಗೆ ನ್ಯಾನೋ ಯೂರಿಯಾ ದ್ರಾವಣವನ್ನು ಪ್ರತಿ ಲೀಟರ್ ನೀರಿಗೆ ೪ ಮಿಲೀ ಮಿಶ್ರಣ ಮಾಡಿ ಬೆಳೆಯ ಎಲೆಗಳ ಮೇಲೆ ಸಿಂಪಡಿಸಬಹುದು. ಉತ್ತಮ ಫಲಿತಾಂಶಕ್ಕಾಗಿ ೨೦ರಿಂದ ೨೫ ದಿನಗಳ ಅಂತರದಲ್ಲಿ ಎರಡು ಬಾರಿ ಸಿಂಪಡಿಸಬೇಕು. ನ್ಯಾನೋ ಯೂರಿಯಾ ಗೊಬ್ಬರವು ಚಿಕ್ಕಗಾತ್ರದ ಕಣಗಳನ್ನು ಹೊಂದಿದ್ದು, ಗಿಡಕ್ಕೆ ಬೇಕಾಗಿರುವ ಸಾರಜನಕವನ್ನು ಸರಿಯಾದ ಪ್ರಮಾಣದಲ್ಲಿ ಒದಗಿಸಿ ಶೇ. ೮೦ರಷ್ಟು ಗೊಬ್ಬರವನ್ನು ಉಪಯೋಗಿಸಲ್ಪಡುತ್ತದೆ ಎಂದರು.ಅಧ್ಯಕ್ಷತೆಯನ್ನು ಕೃಷಿಕ ಸಮಾಜದ ಅಧ್ಯಕ್ಷ ಹನುಮರೆಡ್ಡಿ ನಡುವಿನಮನಿ ವಹಿಸಿ ಮಾತನಾಡಿದರು. ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಹನುಮರೆಡ್ಡಿ ನಡುವಿನಮನಿ ಅವರು ದುಂಡಶಿಯ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆ(ಅರಟಾಳ)ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಸನ್ಮಾನಿಸಲಾಯಿತು.

ಕೃಷಿಕ ಸಮಾಜದ ಪದಾಧಿಕಾರಿಗಳಾದ ಚಂದ್ರಶೇಖರ ಮಾನೋಜಿ, ಯಲ್ಲಪ್ಪ ಬಾರಕೇರ, ಟಾಕನಗೌಡ ಪಾಟೀಲ, ನಿರ್ದೇಶಕರು ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಕಳವು

ರಾಣಿಬೆನ್ನೂರು: ಹಾಡಹಗಲೇ ಮನೆಯಲ್ಲಿದ್ದ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಗುರುವಾರ ತಾಲೂಕಿನ ಗಂಗಾಪುರ ಗ್ರಾಮದಲ್ಲಿ ಜರುಗಿದೆ.ಗ್ರಾಮದ ಕರ್ಣ ಗಂಗಣ್ಣನವರ ಮನೆಗೆ ನುಗ್ಗಿದ ಕಳ್ಳರು ಮನೆಯ ತಿಜೋರಿಯಲ್ಲಿಟ್ಟಿದ್ದ ₹1.20 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಳುವು ಮಾಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

PREV

Latest Stories

ಡಿಕೆಶಿ ಪರ ದಾವಣಗೆರೆಯಲ್ಲಿ 101 ತೆಂಗಿನಕಾಯಿ ಸೇವೆ
ಬೆಂಗಳೂರು-ತುಮಕೂರುಪ್ರಯಾಣ, ಜನ ಹೈರಾಣ
ಸ್ಮಾರ್ಟ್‌ ಮೀಟರ್‌ ವಿವಾದ: ಸಚಿವಜಾರ್ಜ್ ವಿರುದ್ಧ ಬಿಜೆಪಿ ದೂರು