ಸಮತೋಲಿತ ಆಹಾರ ವಿದ್ಯಾರ್ಥಿಗಳಿಗೆ ಅಗತ್ಯ

KannadaprabhaNewsNetwork |  
Published : Sep 27, 2024, 01:21 AM IST
ಪೊಟೋ-ಪಟ್ಟಣದ ಸರ್ಕಾರಿ ಮಾದರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ನಡೆದ ಪೋಷಣ ಅಭಿಯಾನವನ್ನು ಸಿಆರ್ಪಿ ಸತೀಶ ಬೋಮಲೆ ವೀಕ್ಷಣೆ ಮಾಡಿದರು. | Kannada Prabha

ಸಾರಾಂಶ

ವಿದ್ಯಾರ್ಥಿ ದೆಸೆಯಲ್ಲಿ ಮಕ್ಕಳು ಸದೃಢ ಆರೋಗ್ಯ ಹೊಂದುವುದು ಅಗತ್ಯವಾಗಿದೆ ಎಂಬುದನ್ನು ಅರಿತ ಕೇಂದ್ರ ಸರ್ಕಾರ ಭಾರತ ಪೋಷಣ ಅಭಿಯಾನ ಆರಂಭಿಸುವ ಮೂಲಕ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮ ಹಾಕಿಕೊಂಡಿದೆ

ಲಕ್ಷ್ಮೇಶ್ವರ: ಅಪೌಷ್ಟಿಕತೆ, ಸಮಾಜದ ಮೇಲೆ ಅದರ ಪ್ರಭಾವ ಮತ್ತು ಆರೋಗ್ಯಕರ ಮತ್ತು ಸಮತೋಲಿತ ಆಹಾರದ ಮೌಲ್ಯ ತಿಳಿಸಲು ವಿದ್ಯಾರ್ಥಿಗಳಿಗೆ ಚಟುವಟಿಕೆ ಆಯೋಜಿಸಲಾಗುತ್ತಿದೆ ಎಂದು ಸಿಆರ್‌ಪಿ ಸತೀಶ ಬೋಮಲೆ ಹೇಳಿದರು. ಗುರುವಾರ ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ನಡೆದ ಪೋಷಣ ಅಭಿಯಾನ ಕಾರ್ಯಕ್ರಮ ವೀಕ್ಷಣೆ ಮಾಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಆಹಾರಗಳು ಮತ್ತು ಅವುಗಳ ಪ್ರಯೋಜನಗಳು, ಆಹಾರಗಳ ವೈಜ್ಞಾನಿಕ ಹೆಸರು, ದೈನಂದಿನ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯ ಬಗ್ಗೆ ಹೆಚ್ಚು ಸಕ್ರಿಯ ಜಾಗೃತಿ ತರಲು ಗಮನಹರಿಸಲಾಗಿದೆ. ಮಕ್ಕಳು ಮತ್ತು ಸಮುದಾಯದ ಆರೋಗ್ಯ ಸುಧಾರಿಸಲು, ಪೋಷಣ ಅಭಿಯಾನವನ್ನು 2018ರಲ್ಲಿ ಭಾರತದಾದ್ಯಂತ ಪ್ರಾರಂಭಿಸಲಾಯಿತು ಎಂದು ಹೇಳಿದರು.

ವಿದ್ಯಾರ್ಥಿ ದೆಸೆಯಲ್ಲಿ ಮಕ್ಕಳು ಸದೃಢ ಆರೋಗ್ಯ ಹೊಂದುವುದು ಅಗತ್ಯವಾಗಿದೆ ಎಂಬುದನ್ನು ಅರಿತ ಕೇಂದ್ರ ಸರ್ಕಾರ ಭಾರತ ಪೋಷಣ ಅಭಿಯಾನ ಆರಂಭಿಸುವ ಮೂಲಕ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮ ಹಾಕಿಕೊಂಡಿದೆ. ಬಿಸಿಯೂಟ, ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿ ನೀಡುವ ಮೂಲಕ ಅಪೌಷ್ಟಿಕತೆಯನ್ನು ಹೋಗಲಾಡಿಸುವ ಕಾರ್ಯ ಮಾಡುತ್ತಿದೆ. ವಿದ್ಯಾರ್ಥಿಗಳು ಸರ್ಕಾರದ ಇಂತಹ ಯೋಜನೆಗಳ ಪ್ರಯೋಜನ ಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಬೇಕು ಎಂದು ಹೇಳಿದರು.

ಈ ವೇಳೆ ಸಹ ಶಿಕ್ಷಕ ಆರ್.ಎಂ. ಶಿರಹಟ್ಟಿ, ಎಚ್.ಡಿ. ನಿಂಗರೆಡ್ಡಿ, ಸ್ವಪ್ನಾ ಕಾಳೆ, ಅಕ್ಷತಾ ಕಾಟಿಗರ, ಲಕ್ಷ್ಮಿ ಹತ್ತಿಕಟ್ಟಿ, ಆರ್.ಕೆ. ಉಪನಾಳ ಹಾಗೂ ಶಾಲೆಯ ಅಡುಗೆ ಸಿಬ್ಬಂದಿ ರಜೀಯಾ ನದಾಫ್, ಶಶಿಕಲಾ ರಾಯಭಾಗಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!