ಕನ್ನಡಪ್ರಭ ವಾರ್ತೆ ಉಡುಪಿ
ಅವರು ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಉಡುಪಿ ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸರ್ಕಾರಿ ಆಸ್ಪತ್ರೆ ಸೇರಿದಂತೆ ಹೆಚ್ಚಿನ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದಕ್ಕೆ ಕಾರಣ ಸಮಾಜ. ಹಣ ಪಡೆದು ಮತ ಹಾಕುತ್ತಾರೆ. ಹೀಗಾದಾಗ ಉತ್ತಮ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ಜಾಗೃತವಾದ ಸಮಾಜ, ಸಾಮಾಜಿಕ ಜವಾಬ್ದಾರಿಯೊಂದಿಗೆ ಸ್ವಾರ್ಥವನ್ನು ಬಿಟ್ಟಾಗ ಉತ್ತಮ ದೇಶವನ್ನು ಕಟ್ಟಲು ಸಾಧ್ಯ ಎಂದರು.ದೇಶದಲ್ಲಿ ಪ್ರಸ್ತುತ 5 ಕೋಟಿ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಇವೆ. ಪ್ರಪಂಚದ ಇತರೇ ನ್ಯಾಯಾಂಗ ವ್ಯವಸ್ಥೆಗೆ ಹೋಲಿಸಿದರೆ ಭಾರತದಲ್ಲಿ ಪ್ರಕರಣ ವಿಲೇವಾರಿ ತ್ವರಿತವಾಗಿದೆ ಎಂದರು.
ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಕಿರಣ್ ಎಸ್ ಗಂಗಣ್ಣನವರ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಪ್ರ.ಕಾರ್ಯದರ್ಶಿ ರಾಜೇಶ್ ಎ.ಆರ್ ವಂದಿಸಿದರು. ವಕೀಲ ಶ್ರೀನಿಧಿ ಹೆಗ್ಡೆ ಅತಿಥಿಗಳನ್ನು ಪರಿಚಯಿಸಿದರು. ಟಿ.ವಿಜಯಕುಮಾರ್ ಶೆಟ್ಟಿ ನಾಡಗೀತೆ ಹಾಡಿದರು. ಭಾಗವತ ಕೆ.ಜೆ ಗಣೇಶ್ ಪ್ರಾರ್ಥಿಸಿದರು. ನ್ಯಾಯವಾದಿ ಸಹನಾ ಕುಂದರ್ ನಿರೂಪಿಸಿದರು.