- ನೀಚ ಮನಸ್ಸಿನ ವ್ಯಕ್ತಿ ಎಂದು ತೇಜೋವಧೆ: ಆರೋಪ
ಕನ್ನಡಪ್ರಭ ವಾರ್ತೆ ದಾವಣಗೆರೆ
ವೃತ್ತಿ ರಂಗಭೂಮಿ ರಂಗಾಯಣದ ಸಕಾರಾತ್ಮಕ ಚಟುವಟಿಕೆ, ನೂತನ ರಂಗಾಯಣ ನಿರ್ಮಾಣಕ್ಕೆ ಸರ್ಕಾರದಿಂದ 10 ಎಕರೆ ಜಮೀನು, ₹3 ಕೋಟಿ ಅನುದಾನ ಪಡೆದು, ಸಂಸ್ಥೆಯನ್ನು ಕಟ್ಟಲಾಗುತ್ತಿದೆ. ಇದನ್ನು ಸಹಿಸಲಾಗದೇ ಅಹಂಕಾರಿ, ಸ್ವಾರ್ಥ ತುಂಬಿರುವ ನೀಚ ಮನಸ್ಸಿನ ವ್ಯಕ್ತಿಯೆಂಬುದಾಗಿ ತಮ್ಮನ್ನು ವೃತ್ತಿ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಎ.ಭದ್ರಪ್ಪ ತಮ್ಮ ಸಂಘದ ವಾರ್ಷಿಕೋತ್ಸವ ಕುರಿತ ಸುದ್ದಿಗೋಷ್ಟಿಯಲ್ಲಿ ನಿಂದಿಸಿದ್ದಾರೆ. ಇದು ಖಂಡನೀಯ ಎಂದು ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ತಿಳಿಸಿದ್ದಾರೆ.ವೃತ್ತಿ ರಂಗಭೂಮಿ ರಂಗಾಯಣ ಸ್ಥಾಪನೆ ಮೂಲ ಉದ್ದೇಶಗಳನ್ನು ಸಾಕಾರಗೊಳಿಸಲು, ತಜ್ಞರ ಸಮಿತಿ ಶಿಫಾರಸಿನ ಮೇರೆಗೆ ಸರ್ಕಾರ ತಮ್ಮನ್ನು ನಿರ್ದೇಶಕನನ್ನಾಗಿ ನೇಮಿಸಿದೆ. ರಾಜ್ಯಮಟ್ಟದ ಕಾರ್ಯವ್ಯಾಪ್ತಿ ಹೊಂದಿರುವ ರೆಪರ್ಟರಿ ಆಗಿರುವ ನಮ್ಮ ರಂಗಾಯಣ ಕೇವಲ ಒಂದು ಜಿಲ್ಲೆಯ ಸಂಸ್ಥೆಯಲ್ಲ. ಇದು ಫಂಡಿಂಗ್ ಏಜೆನ್ಸಿ ಸಹ ಅಲ್ಲ. ಈ ಬಗ್ಗೆ ಸ್ಪಷ್ಟ ಸರ್ಕಾರಿ ಆದೇಶ, ಮಾರ್ಗಸೂಚಿಗಳಿವೆ ಎಂದಿದ್ದಾರೆ.
- - -
-20ಕೆಡಿವಿಜಿ41: ಮಲ್ಲಿಕಾರ್ಜುನ ಕಡಕೋಳ