ಥಗ್ ಲೈಫ್ ಚಿತ್ರ ನೋಡದಂತೆ ಸ್ವಾಭಿಮಾನಿ ಕನ್ನಡಿಗರಿಗೆ ಸೈಕಲ್ ಸವಾರಿ ಮೂಲಕ ಮನವಿ

KannadaprabhaNewsNetwork |  
Published : Jun 19, 2025, 12:34 AM IST
6 | Kannada Prabha

ಸಾರಾಂಶ

ಕನ್ನಡದ ನೆಲ ಜಲ ಭಾಷೆ ವಿಚಾರಕ್ಕೆ ಧಕ್ಕೆ ಬಂದಾಗ ಧ್ವನಿಯೆತ್ತುವುದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನ ಕರ್ತವ್ಯ, ಕಮಲ್ ಹಾಸನ್ ಚಿತ್ರ ಪ್ರದರ್ಶನಕ್ಕೆ ಸುಪ್ರಿಂ ಕೋರ್ಟ್ ಆದೇಶ ನೀಡಿದೆ ಅದನ್ನ ಒಪ್ಪಿಕೊಳ್ಳೋಣ, ಆದರೆ ಅದನ್ನ ನೋಡಲೇಬೇಕು ಎಂದು ಆದೇಶಿಸಿಲ್ಲ.

ಕನ್ನಡಪ್ರಭ ವಾರ್ತೆ ಮೈಸೂರು

ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿ, ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದ ತಮಿಳು ನಟ ಕಮಲ್ ಹಾಸನ್ ನಟನೆಯ ಥಗ್ ಲೈಫ್‌ ಚಿತ್ರ ಬಹಿಷ್ಕರಿಸುವಂತೆ ಸ್ವಾಭಿಮಾನಿ ಕನ್ನಡಿಗರಿಗೆ ಸೈಕಲ್ ಸವಾರಿ ಮೂಲಕ ಮನವಿ ಮಾಡಿದರು.

ಅಗ್ರಹಾರ ವೃತ್ತದ ಪದ್ಮ ಚಿತ್ರ ಮಂದಿರ ಬಳಿ ಜಮಾಯಿಸಿದ ಪ್ರಜ್ಞಾವಂತ ನಾಗರೀಕರ ವೇದಿಕೆಯ ಪದಾಧಿಕಾರಿಗಳು ಕನ್ನಡದ ಚಿತ್ರಗಳಿಗೆ ಸೈಕಲ್ ಸವಾರಿ ಮೂಲಕ ಪ್ರಚಾರ ಮಾಡುತ್ತಿದ್ದ ಪಾರಂಪರಿಕ ಮಾದರಿಯಲ್ಲೆ ಕಮಲ್ ಹಾಸನ್ ಭಾವಚಿತ್ರಕ್ಕೆ ಮಸಿ ಬಳೆದು ಥಗ್ ಲೈಫ್‌ ಚಿತ್ರ ನೋಡದಂತೆ ಬಹಿಷ್ಕರಿಸೋಣ ಎಂದು ಸಂದೇಶ ಸಾರಿದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ. ಚಂದ್ರಶೇಖರ್ ಮಾತನಾಡಿ, ಕನ್ನಡದ ನೆಲ ಜಲ ಭಾಷೆ ವಿಚಾರಕ್ಕೆ ಧಕ್ಕೆ ಬಂದಾಗ ಧ್ವನಿಯೆತ್ತುವುದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನ ಕರ್ತವ್ಯ, ಕಮಲ್ ಹಾಸನ್ ಚಿತ್ರ ಪ್ರದರ್ಶನಕ್ಕೆ ಸುಪ್ರಿಂ ಕೋರ್ಟ್ ಆದೇಶ ನೀಡಿದೆ ಅದನ್ನ ಒಪ್ಪಿಕೊಳ್ಳೋಣ, ಆದರೆ ಅದನ್ನ ನೋಡಲೇಬೇಕು ಎಂದು ಆದೇಶಿಸಿಲ್ಲ, ಹಾಗಾಗಿ ಕನ್ನಡಿಗರನ್ನ ಕೆರಳಿಸಿರುವ ದುರಂಕಾರಿ ಕಮಲ್ ಹಾಸನ್ ಚಿತ್ರವನ್ನ ಕನ್ನಡಿಗರ ನೋಡಬಾರದು ಚಿತ್ರ ನಿರ್ಮಾಪಕರು ಚಿತ್ರವಿತರಕರು ಕೂಡ ಚಿತ್ರಮಂದಿರದಲ್ಲಿ ಪ್ರದರ್ಶನಕ್ಕೆ ಅವಕಾಶ ಕೊಡದೇ ಕನ್ನಡದ ಅಸ್ಮಿತೆಗೆ ಗೌರವಿಸಬೇಕು ಎಂದರು.

ಕೆ.ಆರ್. ಬ್ಯಾಂಕ್ ಅಧ್ಯಕ್ಷ ಬಸವರಾಜು ಮಾತನಾಡಿ, ತಮಿಳುನಾಡಿನಲ್ಲೆ ಸಾಕಷ್ಟು ತಿರಿಸ್ಕಾರ ಅಪಕೀರ್ತಿ ಪಡೆದಿರುವ ನಟ ಕಮಲ್ ಹಾಸನ್ ಕನ್ನಡದ ಭಾಷೆ ಬಗ್ಗೆ ಅವಹೇಳನವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ, ಕ್ಷಮೆಯನ್ನೇ ಕೇಳದೆ ದುರಂಕಾರ ಮೆರೆದಿರುವ ಕಮಲ್ ಹಾಸನ್ ಚಿತ್ರವನ್ನ ನೋಡದೆ ಕನ್ನಡಿಗರು ತಕ್ಕ ಪಾಠ ಕಲಿಸಬೇಕು, ಕೆಲವು ಸಂಘ ಸಂಸ್ಥೆಗಳು ಕಮಲ್ ಹಾಸನನಿಗೆ ನೀಡಿರುವ ಪ್ರಶಸ್ತಿಗಳನ್ನ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ನಗರಪಾಲಿಕ ಮಾಜಿ ಸದಸ್ಯ ಎಂ.ಡಿ. ಪಾರ್ಥಸಾರಥಿ, ನಿರ್ದೇಶಕರಾದ ಎಚ್.ವಿ. ಭಾಸ್ಕರ್, ಸಾಮಾಜಿಕ ಹೋರಾಟಗಾರ ವಿಕ್ರಮ್ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಎಸ್.ಎನ್. ರಾಜೇಶ್, ಗೌರಿಶಂಕರ, ಶಿವು, ರಾಕೇಶ್, ಶಿವಲಿಂಗ ಸ್ವಾಮಿ, ಜತ್ತಿ ಪ್ರಸಾದ್, ವಿಜಯಕುಮಾರ್‌ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ