ಕನ್ನಡಪ್ರಭ ವಾರ್ತೆ ಕುಶಾಲನಗರ
ತಡರಾತ್ರಿಯಲ್ಲಿ ಭಾರಿ ಸ್ಫೋಟದ ಸದ್ದಿನೊಂದಿಗೆ ಕಂಬದಿಂದ ತಂತಿ ತುಂಡಾಗಿ ಬಿದ್ದಿದ್ದು ಬೆಳಗಿನ ಜಾವ ಸ್ಥಳೀಯರ ಗಮನಕ್ಕೆ ಬಂದಿದೆ. ಅದೃಷ್ಟವಶಾತ್ ರಾತ್ರಿ ವೇಳೆ ಯಾರೂ ಆ ಭಾಗದಲ್ಲಿ ಚಲಿಸದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ.
ಮುಂಜಾನೆ ಹೊರಬಂದು ನೋಡಿದ ವೇಳೆ ವಿದ್ಯುತ್ ತಂತಿ ಚಂದ್ರಮೋಹನ್ ಅವರ ಮನೆಯ ಗೇಟ್ ಮೇಲೆ ಬಿದ್ದಿದ್ದು ವಿದ್ಯುತ್ ಪ್ರವಹಿಸುವುದು ಖಚಿತಗೊಂಡಿದೆ.ತಕ್ಷಣ ಸಂಬಂಧಿಸಿದ ಸೆಸ್ಕ್ ಜೂನಿಯರ್ ಎಂಜಿನಿಯರ್ ಮತ್ತು ಲೈನ್ ಮ್ಯಾನ್ ಸಂಪರ್ಕಿಸಿದರೂ ಉತ್ತರ ದೊರೆಯದೆ ಸುಮಾರು ಒಂದು ಗಂಟೆ ಕಾಲ ಯಾವುದೇ ರೀತಿಯ ಅವಘಡ ಸಂಭವಿಸಿದಂತೆ ಸ್ಥಳದಲ್ಲೇ ಎಚ್ಚರಿಕೆಯಿಂದ ಕಾಯಬೇಕಾದ ಪರಿಸ್ಥಿತಿ ಒದಗಿ ಬಂತು.
--------------------
ಇನ್ನೂ ಪತ್ತೆಯಾಗದ ನದಿಗೆ ಹಾರಿದ ಸರ್ಕಾರಿ ನೌಕರಕುಶಾಲನಗರ: ಕಾವೇರಿ ನದಿಗೆ ಹಾರಿದ ಮಡಿಕೇರಿ ಉಪ ವಿಭಾಗಾಧಿಕಾರಿ ಕಚೇರಿಯ ನೌಕರ ಅರುಣ್ ಇನ್ನೂ ಪತ್ತೆಯಾಗಿಲ್ಲ.
ಕಳೆದ ಐದು ದಿನಗಳಿಂದ ಎನ್ಡಿಆರ್ಎಫ್ ಸೇರಿದಂತೆ 5 ತಂಡಗಳು ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದು ಇದುವರೆಗೂ ಅರುಣ್ ಪತ್ತೆಯಾಗಿಲ್ಲ ಎಂದು ಕುಶಾಲನಗರ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ ತಿಳಿಸಿದ್ದಾರೆ.ಮೃತದೇಹ ಪತ್ತೆಗಾಗಿ ಉಡುಪಿ ಮಲ್ಪೆಯ ನುರಿತ ಈಜು ತಜ್ಞ ಈಶ್ವರ ಮಲ್ಪೆ ಅವರು ಕೂಡ ಆಗಮಿಸಿ ಒಂದು ದಿನದ ಕಾರ್ಯಾಚರಣೆ ನಡೆಸಿದ್ದಾರೆ. ಕಾವೇರಿ ನದಿಯಲ್ಲಿ ಉಕ್ಕಿ ಹರಿಯುವ ನೀರಿನ ನಡುವೆ ಶೋಧಕಾರ್ಯಕ್ಕೆ ತೊಡಕು ಉಂಟಾದ ಹಿನ್ನೆಲೆಯಲ್ಲಿ ಅವರು ಹಿಂತಿರುಗಿರುವುದಾಗಿ ಡಿವೈಎಸ್ಪಿ ತಿಳಿಸಿದ್ದಾರೆ.