- ಮೋದಿ ಸರ್ಕಾರದ ಬಜೆಟ್ಗೆ ಕೇಂದ್ರದ ಮಾಜಿ ಸಚಿವ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದ ಚೊಚ್ಚಲ ಬಜೆಟ್ನಲ್ಲಿ ಅಭಿವೃದ್ಧಿ ಭಾರತದ ಸಂಕಲ್ಪವನ್ನು ಪ್ರಸ್ತಾಪಿಸಲಾಗಿದೆ. ರೈತರು, ದೇಶದ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದ ಬಜೆಟ್ ಇದಾಗಿದೆ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ. ಸಿದ್ದೇಶ್ವರ ಸ್ವಾಗತಿಸಿದ್ದಾರೆ.
ಅಭಿವೃದ್ಧಿ ಭಾರತದ ಸಂಕಲ್ಪವನ್ನು ಪ್ರಸ್ತಾಪಿಸುವ ಕೇಂದ್ರ ಬಜೆಟ್ ಇದಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ 7ನೇ ಬಾರಿಗೆ ಮಂಡಿಸಿದ ಬಜೆಟ್ನಲ್ಲಿ 9 ಕ್ಷೇತ್ರಗಳಿಗೆ ಆದ್ಯತೆ ನೀಡಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ. ಬಡವರು, ಮಹಿಳೆಯರು, ಯುವಕರು, ರೈತರು, ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದ ಬಜೆಟ್ ಎಂದು ತಿಳಿಸಿದ್ದಾರೆ.ವಿಶೇಷವಾಗಿ ಬಜೆಟ್ನಲ್ಲಿ ₹1.52 ಲಕ್ಷ ಕೋಟಿ ಅನುದಾನವನ್ನು ಕೃಷಿ ಕ್ಷೇತ್ರಕ್ಕೆಂದೇ ಮೀಸಲಿಡಲಾಗಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು ನೀಡಲಾಗಿದೆ. ಉದ್ಯೋಗ ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣಕ್ಕಾಗಿ ₹1.48 ಲಕ್ಷ ಕೋಟಿ ಮೀಸಲಿಡಲಾಗಿದೆ. 1 ಸಾವಿರ ಕೈಗಾರಿಕಾ ತರಬೇತಿ ಕೇಂದ್ರಗಳ ಸ್ಥಾಪನೆ, 20 ಲಕ್ಷ ಯುವಕರಿಗೆ ಕೌಶಲ್ಯಾಭಿವೃದ್ಧಿ ಯೋಜನೆಯಡಿ ತರಬೇತಿ ಸಹ ಒಳ್ಳೆಯ ಕಾರ್ಯ ಎಂದು ಹೇಳಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸರ್ಕಾರಿ ನೌಕರರಿಗೆ ತೆರಿಗೆಯಲ್ಲಿ ವಿನಾಯಿತಿ ನೀಡಲಾಗಿದೆ. ಇನ್ನೂ ಹಲವಾರು ಯೋಜನೆಗಳನ್ನು ಪ್ರಕಟಿಸುವ ಮೂಲಕ ಸಮೃದ್ಧ ಹಾಗೂ ಬಲಶಾಲಿ ಅಭಿವೃದ್ಧಿ ಭಾರತದ ಸಂಕಲ್ಪವನ್ನು ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಚೊಚ್ಚಲ ಬಜೆಟ್ ಅಂಶಗಳು ಸ್ವಾಗತಾರ್ಹವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- - - -23ಕೆಡಿವಿಜಿ2: ಜಿ.ಎಂ.ಸಿದ್ದೇಶ್ವರ, ಮಾಜಿ ಸಂಸದ.