ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಶಿಕ್ಷಕ, ವಾಗ್ಮಿ ಬಸವರಾಜ ಹಂಚಲಿ ಮಾತನಾಡಿ, ಕನ್ನಡದ ಸೇವೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಮಾಡುತ್ತಿದೆ. ದೇವರ ರೂಪದಲ್ಲಿರುವ ತಂದೆ-ತಾಯಿಯ ಸೇವೆಯನ್ನು ಪ್ರತಿಯೊಬ್ಬರೂ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು. ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ನೀಡುವ ಮೂಲಕ ತಮ್ಮ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.ಪೊಲೀಸ್ ಇಲಾಖೆಯ ಬಸವರಾಜ ಕಳ್ಳಿಗುಡ್ಡ ಅವರು ಯಾದಗಿರಿ ಮೈಲಾರಲಿಂಗೇಶ್ವರ ಮಹಿಮೆ ಕುರಿತು, ಶಿಕ್ಷಕ ವೈ.ಆರ್.ಇಂಗಳೇಶ್ವರ ಅವರು ಶರಣರ ಚಿಂತನೆ ಹಾಗೂ ಸಾಮಾಜಿಕ ಮೌಲ್ಯಗಳ ಕುರಿತು ಉಪನ್ಯಾಸ ನೀಡಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಾನಂದ ಡೋಣೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಮುಖಂಡರಾದ ಹೈದರಸಾಬ್ ಚಪ್ಪರಬಂದ, ಮಾರುತಿ ನಲವಡೆ, ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಎಸ್.ಬಿ.ಕೊಟ್ರಶೆಟ್ಟಿ, ಕಸಾಪ ಮಹಿಳಾ ಪ್ರತಿನಿಧಿ ಶಾಂತಾ ಚೌರಿ ಇದ್ದರು. ಮಹಾದೇವಿ ಬಿರಾದಾರ ಪ್ರಾರ್ಥಿಸಿದರು. ಬಿ.ವಿ.ಚಕ್ರಮನಿ ಸ್ವಾಗತಿಸಿದರು. ಕೊಟ್ರೇಶ ಹೆಗ್ಡಾಳ ನಿರೂಪಿಸಿದರು. ಬಿ.ಎಂ.ಚಿಂಚೋಳ್ಳಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಬಸವೇಶ್ವರ ಪ್ರತಿಮೆಗೆ ಹಾಗೂ ದಿ.ಕಸ್ತೂರಿ ಗಿರಿಮಲಪ್ಪ ಬೆಣ್ಣೂರ, ಲಿಂ.ಸಿದ್ದಪ್ಪ ಬಸಲಿಂಗಪ್ಪ ಹಂಚಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ನಮನ ಸಲ್ಲಿಸಲಾಯಿತು. ಬಾಕ್ಸ್...ಕನ್ನಡಪ್ರಭದ ವರದಿಗಾರ ನಂದಿಹಾಳ ಸೇರಿದಂತೆ ಗಣ್ಯರಿಗೆ ಸನ್ಮಾನಇದೇ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕವು ನೀಡುವ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಪ್ರಶಸ್ತಿಗೆ ಭಾಜನರಾದ ಕನ್ನಡಪ್ರಭದ ತಾಲೂಕು ಹಿರಿಯ ವರದಿಗಾರ ಬಸವರಾಜ ನಂದಿಹಾಳ ಸೇರಿದಂತೆ ಪತ್ರಕರ್ತ ಪ್ರಕಾಶ ಬೆಣ್ಣೂರ, ನಿವೃತ್ತ ಶಿಕ್ಷಕ ಶ್ರೀಶೈಲ ಮುಳವಾಡ ಅವರನ್ನು ತಾಲೂಕು ಕಸಾಪದಿಂದ ಸನ್ಮಾನಿಸಿ, ಗೌರವಿಸಲಾಯಿತು.ಕೋಟ್...ಸಾಮಾಜಿಕ ರಂಗದ ಪತ್ರಿಕಾರಂಗದ ಸೇವೆಯು ಅಮೋಘವಾಗಿದೆ. ಸ್ಥಳೀಯ ಎಲ್ಲ ಕಾರ್ಯನಿರತ ಪತ್ರಕರ್ತರು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಚೆಗೆ ಜಿಲ್ಲಾಮಟ್ಟದ ಪ್ರಶಸ್ತಿಗೆ ಭಾಜನರಾದ ಕನ್ನಡಪ್ರಭದ ತಾಲೂಕು ಹಿರಿಯ ವರದಿಗಾರ ಬಸವರಾಜ ನಂದಿಹಾಳ ಹಾಗೂ ಪತ್ರಕರ್ತ ಪ್ರಕಾಶ ಬೆಣ್ಣೂರ ಅವರನ್ನು ತಾಲೂಕು ಕಸಾಪ ವಿಶೇಷವಾಗಿ ಸನ್ಮಾನಿಸಿದ್ದು ಶ್ಲಾಘನೀಯ.-ಸಿದ್ದಲಿಂಗ ಸ್ವಾಮೀಜಿ, ವಿರಕ್ತಮಠ.