ಕನ್ನಡಪ್ರಭ ವಾರ್ತೆ ಸವದತ್ತಿ
ಪಟ್ಟಣದ ಸ್ವಾಮಿ ವಿವೇಕಾನಂದ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಬದುಕಿನಲ್ಲಿ ಎಲ್ಲವನ್ನು ಅರಿತುಕೊಳ್ಳಲು ನೂರು ಭಾಷೆಗಳನ್ನು ಕಲಿಯಿರಿ. ಆದರೆ, ಕನ್ನಡವನ್ನು ಹೃದಯದಲ್ಲಿಟ್ಟು ಪೂಜಿಸಿ ಗೌರವಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು.
ನಿಕಟಪೂರ್ವ ಅಧ್ಯಕ್ಷ ಬಿ.ವಿ.ಬಿ ನರಗುಂದ ಉದ್ಘಾಟಿಸಿದರು. ನ್ಯಾಯವಾದಿ ಸಿ.ಬಿ.ದೊಡಗೌಡರ, ಮುನವಳ್ಳಿ ಕಸಾಪ ಹೋಬಳಿ ಘಟಕದ ಅಧ್ಯಕ್ಷ ಮೊಹನ ಸರ್ವಿಯವರು ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ ವಿವರಿಸಿದರು.ಕಸಾಪ 110ನೇ ಸಂಸ್ಥಾಪನ ದಿನಾಚರಣೆಯ ಕಾರ್ಯಕ್ರಮದಲ್ಲಿ ಶ್ರಮಿಕರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಕನ್ನಡಪ್ರಭ ಹಿರಿಯ ವರದಿಗಾರರಾದ ಸುರೇಶ ಭೀಮಪ್ಪ ಬಾಳೋಜಿ ಮತ್ತು ರಂಗ ಸಂಮಾನ ಪ್ರಶಸ್ತಿ ಪುರಸ್ಕೃತ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಗೌರವಾಧ್ಯಕ್ಷ ಝಕಿರ ನದಾಫ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.