ಕೊಪ್ಪಳದ ಖಾಸಗಿ ಆಸ್ಪತ್ರೆಯಲ್ಲೇ ಸಂಚಿನ ಕೊಲೆ, ಕೇಸು ದಾಖಲು

KannadaprabhaNewsNetwork |  
Published : Jan 24, 2024, 02:01 AM IST
A case has been registered for conspiracy to murder in a private hospital in Koppal | Kannada Prabha

ಸಾರಾಂಶ

ನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸ್ಥಳೀಯ ನ್ಯಾಯಾಲಯದಿಂದ ಅನುಮತಿ ಪಡೆದು ದಾವಣಗೆರೆಯ ಎಸ್.ಎಸ್. ಶಾಂತಪ್ಪ ಎಂಬವರು ನೀಡಿದ ದೂರಿನ ಆಧಾರದಲ್ಲಿ 11 ಜನರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿದ್ದು, ಪ್ರಕರಣ ಭಾರಿ ಕುತೂಹಲ ಮೂಡಿಸಿದೆ.

ಕೊಪ್ಪಳ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ರೋಗಿಯನ್ನು ಅವರ ಸಂಬಂಧಿಕರೇ ಸಂಚಿನಿಂದ ಕೊಲೆ ಮಾಡಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸ್ಥಳೀಯ ನ್ಯಾಯಾಲಯದಿಂದ ಅನುಮತಿ ಪಡೆದು ದಾವಣಗೆರೆಯ ಎಸ್.ಎಸ್. ಶಾಂತಪ್ಪ ಎಂಬವರು ನೀಡಿದ ದೂರಿನ ಆಧಾರದಲ್ಲಿ 11 ಜನರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿದ್ದು, ಪ್ರಕರಣ ಭಾರಿ ಕುತೂಹಲ ಮೂಡಿಸಿದೆ.

ವಿಜಯನಗರ ಜಿಲ್ಲೆಯ ಹಂಪಸಾಗರ ಗ್ರಾಮದ ಪ್ರದೀಪ್ ಸೇರಿದಂತೆ ೧೧ ಜನರ ವಿರುದ್ಧ ದೂರು ದಾಖಲಾಗಿದೆ.

ಏನಿದು ಘಟನೆ?: ಹಂಪಸಾಗರದ ಪ್ರವೀಣ ಎಂಬಾತ ೨೦೨೧ರ ಮೇ ೧೮ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಆಸ್ಪತ್ರೆಯವರು ಮಾತ್ರೆ, ಆಹಾರ ಮತ್ತು ನೀರು ನೀಡಿದರೂ ಅದನ್ನು ರೋಗಿಗೆ ನೀಡದೇ ೧೧ ಜನರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಶವಂತಪುರದಿಂದ ಹೊರಡೋ ಈ ರೈಲಿನ ಮಾರ್ಗ ಬದಲಾವಣೆ
ಬೆಂಗಳೂರಿಗರೆ ಎಚ್ಚರ : ಇಲ್ಲಿನ ತರಕಾರಿಗಳು ಸೇಫ್ ಅಲ್ಲ..!