ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮಳೆಗಾಗಿ ವೃತ ಆಚರಣೆ:
ಅಲ್ಲದೇ, ಉತ್ತಮ ಮಳೆಯಾಗಿ ಗ್ರಾಮದಲ್ಲಿ ವಾರದ ವೃತವನ್ನು ಹಿಡಿಯಲಾಗಿತ್ತು. ಮಂಗಳವಾರ ಕೊನೆಯ ಐದನೇ ವಾರ ಆಗಿದ್ದರಿಂದ ಚಿಕ್ಕಮಕ್ಕಳು ಗ್ರಾಮದೇವತೆ ದೇವಸ್ಥಾನ ಸೇರಿದಂತೆ ಎಲ್ಲ ದೇವಸ್ಥಾನಗಳಿಗೆ ತೆರಳಿ ನೀರು ನೇವೇದ್ಯ ಸರ್ಮಸಿದರು. ಬೆಳಗಿನ ಜಾವ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀ ಮಳೆರಾಜೇಂದ್ರ ಸ್ವಾಮಿಮಠದ ಪೂಜ್ಯರಾದ ಮೌನೇಶ್ವರ ಸ್ವಾಮಿಗಳು ಹಾಗೂ ಗುರುನಾಥಸ್ವಾಮಿಗಳ ನೇತೃತ್ವದಲ್ಲಿ ಶ್ರೀ ಗ್ರಾಮ ದೇವಿಗೆ ಪಂಚಾಮೃತ ಅಭಿಷೇಕ, ಶ್ರೀ ಸೂಕ್ತ, ಪುರುಷಸೂಕ್ತ, ನಂತರ ಶ್ತೀ ಚಕ್ರಕ್ಕೆ ಸಹಸ್ರ ನಾಮಾವಳಿ, ರಾಜರಾಜೇಶ್ವರಿ ಅಷ್ಟೋತ್ತರ ಶತನಾಮಾವಳಿ ಮೂಲಕ ಕುಂಕುಮಾರ್ಚನೆ, ಎಲೆಪೂಜೆ, ಪುಷ್ಪಾಲಂಕಾರ, ಮಹಾಮಂಗಳಾರುತಿ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು.ನಂತರ ಸಂಜೆ ಶ್ರೀ ಮಾರುತೇಶ್ವರ ದೇವಸ್ಥಾನದಿಂದ ಶ್ರೀ ಗ್ರಾಮದೇವಿ ಘಳಿಗೆಯನ್ನು ಮೆರವಣಿಗೆ ಮೂಲಕ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗ್ರಾಮದೇವಿ ದೇವಸ್ಥಾನಕ್ಕೆ ತಲುಪಿದರು. ಮೆರವಣಿಗೆಯಲ್ಲಿ ಡೊಳ್ಳು ವಾದ್ಯಗಳ ಮೂಲಕ ಛತ್ರಿ ಚಾಮರಗಳು. ಸುಮಂಗಲೆಯರು ಆರತಿ ಹಿಡಿದು ದೇವಿ ಘಳಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆ ಬರುವ ದಾರಿಯುದ್ದಕ್ಕೂ ಜನರು ನೀರು ಹಾಕಿ ಮಡಿ ಮಾಡಿ ಸ್ವಾಗತಿಸಿ, ಪೂಜೆ ಪುನಸ್ಕಾರ ನಡೆಸಿದರು.
ಪ್ರತಿವರ್ಷದಂತೆ ಈ ವರ್ಷವೂ ಮೆರವಣಿಗೆಯಲ್ಲಿ ಇರಗಾರ್ಕಿ ವಿಶೇಷವಾಗಿತ್ತು. ಇರಗಾರ್ಕಿ, ಕಬ್ಬಿಣದ ಗುಂಡುಗಳಿರುವ ಗೊಂಚಲುಗಳನ್ನು ಕೈಯಲ್ಲಿ ಹಿಡಿದು, ಡೊಳ್ಳಿನ ರಣ ಹಲಗೆಯ ಶಬ್ಧದ ವೇಗಕ್ಕೆ ಹೋಗಿ, ತನ್ನೊಳಗಿನ ಪೌರುಷಗಳಿಂದ ಆ ಕಬ್ಬಿಣ ಗುಂಡುಗಳಿಂದ ದೇಹದ ಹಿಂಭಾಗಕ್ಕೆ ಬಡಿದುಕೊಳ್ಳುವುದು. ಇದು ನೋಡುಗರನ್ನು ರೋಮಾಂಚನಗೊಳಿಸಿತು.
ಈ ಸಂದರ್ಭದಲ್ಲಿ ಪೂಜ್ಯರಾದ ಮೌನೇಶ್ವರ ಸ್ವಾಮಿಗಳು, ಜಗನ್ನಾಥಸ್ವಾಮಿಗಳು, ಗ್ರಾಮದ ಗುರು ಹಿರಿಯರು, ಮುಖಂಡರು ಉಪಸ್ಥಿತರಿದ್ದರು.