ಕನ್ನಡಪ್ರಭ ವಾರ್ತೆ ಮಣಿಪಾಲ
ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್, ಆಶ್ರಯದಲ್ಲಿ ‘ಫಿಲಂ ಎಸ್ಥೆಟಿಕ್ಸ್ ಬಿಯಾಂಡ್ ಕರಿಕ್ಯುಲಮ್’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ನೀಡಿದರು.
ಕೃತಕ ಬುದ್ಧಿಮತ್ತೆಯಿಂದಾಗಿ ಹೆಚ್ಚಿನ ಸಂಖ್ಯೆಯ ಚಲನಚಿತ್ರ ಕಲಾವಿದರು ಉದ್ಯೋಗ ಕಳೆದುಕೊಳ್ಳಬಹುದು. ಇದು ಚಲನಚಿತ್ರೋದ್ಯಮದಲ್ಲಿ ಕೃತಕ ಬುದ್ಧಿಮತ್ತೆಯನ್ನು ‘ನೈತಿಕವಾಗಿ ಬಳಕೆ’ ಮಾಡಬೇಕಾದ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದರು.ಇಂದು ನೈತಿಕ ಮಾನದಂಡಗಳನ್ನು ಹಿಡಿದುಕೊಂಡು ಅರ್ಥಪೂರ್ಣ ಸಿನಿಮಾ ಮಾಡುವುದು ನಿರ್ಮಾಪಕರಿಗೆ ಸವಾಲಾಗಿದೆ. ಹಿಂಸೆಯನ್ನು ಚಿತ್ರಿಸುವ ವಿವಿಧ ಸೃಜನಶೀಲಾ ವಿಧಾನಗಳಿರಬಹುದು. ಸಿನಿಮಾಗಳು ಮಹಿಳೆ ಮತ್ತು ಲಿಂಗ ಸಮಾನತೆಯ ವಿಷಯಗಳ ಕುರಿತು ಹೆಚ್ಚು ಸಂವೇದನಾಶೀಲವಾಗುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಚರ್ಚೆಯಲ್ಲಿ ಭಾಗವಹಿಸಿದ ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ, ಅಭಯಸಿಂಹ ಅವರು ‘ಪಡ್ಡಾಯಿ’ ಯಲ್ಲಿ ಸಾರ್ವತ್ರಿಕ ಕಥೆಯನ್ನು ನಿರೂಪಿಸಲು ಪ್ರಾದೇಶಿಕ ವಿವರಗಳನ್ನು ಸಮೃದ್ಧವಾಗಿ ಬಳಸಿಕೊಂಡಿದ್ದಾರೆ ಎಂದರು.
ಮೂಲತಃ ಮಂಗಳೂರಿನವರಾದ ಅಭಯಸಿಂಹ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದು , ಅವರು ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನ ಪದವೀಧರರಾಗಿದ್ದಾರೆ. ಅನೇಕ ಸಾಕ್ಷ್ಯಚಿತ್ರಗಳ ಹೊರತಾಗಿ ಅವರು ಶೇಕ್ಸ್ಪಿಯರ್ನ ಮ್ಯಾಕ್ಬೆತ್ ಆಧಾರಿತ ಪ್ರಶಸ್ತಿ ವಿಜೇತ ತುಳು ಚಲನಚಿತ್ರ ‘ಪಡ್ಡಾಯಿ’ ಸೇರಿದಂತೆ ನಾಲ್ಕು ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ.