ಎಂ. ಪ್ರಹ್ಲಾದ್
ಎರಡನೇ ತಿರುಪತಿ ಎಂಬ ಹೆಗ್ಗಳಿಕೆ ಪಾತ್ರವಾದ ಶ್ರೀಕನಕಾಚಲ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರೆಗೆ ಕನಕಗಿರಿ ಸಜ್ಜುಗೊಂಡಿದ್ದು, ಸಿದ್ಧತೆಗಳು ಬರದಿಂದ ಸಾಗಿವೆ. ರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ.
ವಿದ್ಯುತ್ ದೀಪಾಲಂಕಾರದಿಂದ ದೇಗುಲದ ಗೋಪುರ, ಮಧ್ಯ ಮಂಟಪ, ಹೊರ-ಒಳ ಭಾಗಗಳು ಝಗಮಗಿಸುತ್ತಿವೆ. ಬಸ್ ನಿಲ್ದಾಣದಿಂದ ದೇಗುಲಕ್ಕೆ ಬರುವ ಮುಖ್ಯರಸ್ತೆ ಹಾಗೂ ರಾಜಬೀದಿಯುದ್ದಕ್ಕೂ ಇರುವ ಪಂಪಾಪತಿ, ಗಜಲಕ್ಷ್ಮೀ, ತೇರಿನ ಹನುಮಪ್ಪ, ರಾಮಲಿಂಗೇಶ್ವರ ಸೇರಿ ನಾನಾ ದೇಗುಲಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.ದಾಸೋಹಕ್ಕೆ ಚಾಲನೆ:
ಹೆಚ್ಚಿದ ಪಾದಯಾತ್ರಿಕರ ಸಂಖ್ಯೆ:
ಸಿರಗುಪ್ಪ ತಾಲೂಕಿನ ಕುಡದರಹಾಳು, ಅಣ್ಣಿಗೇರಿ ತಾಲೂಕಿನ ಇಬ್ರಾಹಿಂಪುರ, ಕನಕಗಿರಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಭಕ್ತರು ಪಾದಯಾತ್ರೆ ಮೂಲಕ ಕನಕಾಚಲ ಸನ್ನಿಧಾನಕ್ಕೆ ಬರುತ್ತಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷ ಪಾದಯಾತ್ರೆ ಬರುವ ಭಕ್ತರ ಸಂಖ್ಯೆಯಲ್ಲಿ ಅಧಿಕವಾಗಿದೆ.ದೀರ್ಘದಂಡ ನಮಸ್ಕಾರ:
ಜಿಲ್ಲೆ ಸೇರಿ ನೆರೆಯ ಜಿಲ್ಲೆಯ ಭಕ್ತರ ಇಷ್ಟಾರ್ಥಗಳು ಈಡೇರಿದ್ದರಿಂದ ದೇಗುಲದಲ್ಲಿ ನೂರಾರು ಭಕ್ತರು ದೀರ್ಘದಂಡ ನಮಸ್ಕಾರ ಹಾಕಿ ತಮ್ಮ ಹರಿಕೆ ತೀರಿಸಿ ಧನ್ಯತೆ ಮೆರೆದರು.ರಥೋತ್ಸವಕ್ಕೆ ಅಲಂಕಾರ:
ಮೂಲಾ ನಕ್ಷತ್ರದಲ್ಲಿ ರಥೋತ್ಸವ ನಡೆಯಲಿದ್ದು, ದೇವಸ್ಥಾನ ಸಮಿತಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ನಡುವೆ ರಥ ಕಟ್ಟುವ ಕೆಲಸಗಾರರು ತೇರಿಗೆ ತಳಿರು ತೋರಣಗಳಿಂದ ಶೃಂಗರೀಸುವ ಕೆಲಸ ನಡೆಸಿದ್ದು, ಭಕ್ತರಲ್ಲಿ ರಥೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಮಾ. ೨೧ರ ಸಂಜೆ ೪.೧೫ಕ್ಕೆ ರಥೋತ್ಸವ ಆರಂಭವಾಗಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.