)
ಈಶ್ವರ್ ಶೆಟ್ಟರ
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಮೂಲಕ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿಗೆ ಇನ್ನಿಲ್ಲದ ಮರ್ಮಾಘಾತ ನೀಡಿದೆ. ಆ ಮೂಲಕ ತನ್ನದೆ ವಶದಲ್ಲಿದ್ದ ಸ್ಥಾನವನ್ನು ಮತ್ತೊಮ್ಮೆ ಭದ್ರಪಡಿಸಿಕೊಂಡಿದೆ ಕಾಂಗ್ರೆಸ್. ಹೀಗಾಗಿ ಎಚ್.ವೈ.ಮೇಟಿ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಅವರ ಪುತ್ರ ಉಮೇಶ ಉಸ್ತುವಾರಿಯಾಗಿ ಮುಂದುವರಿದಿದ್ದಾರೆ.
ರಾಜ್ಯಾದ್ಯಂತ ಗಮನ ಸೆಳೆದಿದ್ದ ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷೆಗೂ ಮೀರಿ ಗೆದ್ದು ಬೀಗಿದ್ದು, ಈ ಪ್ರಮಾಣದ ಗೆಲುವನ್ನು ಕಾಂಗ್ರೆಸ್ ಪಕ್ಷ ಸಹ ಊಹಿಸಿರಲಿಲ್ಲ. ಅಂತಹ ಗೆಲುವನ್ನು ಬಾಗಲಕೋಟೆ ಮತದಾರರು ನೀಡುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಇನ್ನಿಲ್ಲದ ಬಲ ನೀಡಿದ್ದಾರೆ.ಎಚ್.ವೈ.ಮೇಟಿ ಅವರ ನಿಧನದ ನಂತರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ಸಿನ ಉಮೇಶ ಮೇಟಿ ಹಾಗೂ ಬಿಜೆಪಿಯ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರ ನಡುವಿನ ಜಿದ್ದಾಜಿದ್ದಿನ ಪೈಪೋಟಿ ನಡೆದು ಅಂತಿಮವಾಗಿ ಕಾಂಗ್ರೆಸ್ಸಿಗೆ ಐತಿಹಾಸಿಕ ಗೆಲುವು ಲಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯಾಗಿದ್ದ ಬಾಗಲಕೋಟೆ ಉಪಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ಪಕ್ಷಕ್ಕೆ ಹಾಗೂ ನಾಯಕತ್ವಕ್ಕೆ ಬೆಂಬಲವಾಗಿ ನಿಂತು ಕಾಂಗ್ರೆಸ್ನ್ನು ಗೆಲ್ಲಿಸಿಕೊಂಡು ಬರುವಲ್ಲಿ ಅವರ ಆಪ್ತ ಬಳಗ ಯಶಸ್ವಿಯಾಗಿದೆ.
ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಕಾಂಗ್ರೆಸ್ ಪಕ್ಷ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಪರ ಯೋಜನೆಗಳನ್ನು ಘೋಷಿಸುವ ಮೂಲಕ ಮತದಾರರ ಓಲೈಕೆಗೆ ಮುಂದಡಿ ಇಡುವ ಮೂಲಕ ಭರವಸೆ ಮೂಡಿಸುವಲ್ಲಿ ಯಶಸ್ವಿಯಾಯಿತು. ಬಾಗಲಕೋಟೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸುಸಜ್ಜಿತ ಮಾರುಕಟ್ಟೆ ನಿರ್ಮಾಣ, ಸಂತ್ರಸ್ತರಿಗೆ ಸೂಕ್ತ ನ್ಯಾಯ ಒದಗಿಸುವ ಭರವಸೆಗಳು ಸಹ ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾದವು. ಜತೆಗೆ ಮೇಟಿ ಕುಟುಂಬಕ್ಕೆ ಟಿಕೆಟ್ ಘೋಷಣೆ ಮಾಡಿದಾಗ ಕಾಂಗ್ರೆಸ್ನಲ್ಲಿಯೇ ಹೆಚ್ಚು ವಿರೋಧಗಳು ಕಾಣದಿರುವುದು ಕೂಡ ಆರಂಭದಲ್ಲಿಯೇ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಯಿತು.
ಮುಖ್ಯಮಂತ್ರಿಗಳ ಅವಿರತ ಶ್ರಮ:
ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು:
ಬಾಗಲಕೋಟೆ ಉಪಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಹುದೊಡ್ಡ ಅಂತರದಲ್ಲಿ ಗೆಲುವು ತಂದುಕೊಡಲು ಹಲವರ ನಿರಂತರ ಪ್ರಯತ್ನಕ್ಕೆ ಮತದಾರ ಪ್ರಭು ಕೈಹಿಡಿದು ಬೆಂಬಲಿಸಿದ್ದಾನೆ. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಒಂದು ತಿಂಗಳ ಕಾಲ ಕ್ಷೇತ್ರದಲ್ಲಿ ಬೀಡು ಬಿಟ್ಟು ಎಲ್ಲ ಸಮುದಾಯಗಳ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾದರೆ, ಉಸ್ತುವಾರಿ ವಹಿಸಿದ್ದ ಸಚಿವ ಸತೀಶ ಜಾರಕಿಹೊಳಿ ಅವರ ಚುನಾವಣೆಯ ಕಾರ್ಯತಂತ್ರ, ಗ್ರಾಮೀಣ ಭಾಗದಲ್ಲಿ ನಡೆಸಿದ ಸಭೆಗಳು ಕಾಂಗ್ರೆಸ್ ಗೆಲುವಿಗೆ ಸಹಕಾರ ನೀಡಿದವು.
ನಾನು ಮೊದಲೇ ಹೇಳಿದ್ದೆ, ಬಾಗಲಕೋಟೆಯಲ್ಲಿ ಕಮಲ ಹಾಗೂ ಜೆಸಿಬಿ ಎರಡೂ ಮನೆಗೆ ಹೋಗುತ್ತವೆ ಎಂದು. ಯತ್ನಾಳ ಹಾಗೂ ವಿಜಯೇಂದ್ರ ಮನೆಗೆ ಹೋಗುತ್ತಾರೆ ಎಂದಿದ್ದೆ. ಇಂದಿನ ಫಲಿತಾಂಶ ಹಾಗೆಯೇ ಆಗಿದೆ. ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಜನರು ಕಾಂಗ್ರೆಸ್ ಕೈ ಹಿಡಿದಿದ್ದಾರೆ.
ಬಾಗಲಕೋಟೆ ಉಪಚುನಾವಣೆ ಗೆಲುವು ರಾಜ್ಯ ಸರ್ಕಾರದ ಸಾಧನೆಗೆ ಮತದಾರರು ನೀಡಿರುವ ಮನ್ನಣೆ. ವಿಜಯಪುರದ ಶಾಸಕರೊಬ್ಬರು ನನ್ನ ಹಾಗೂ ನನ್ನ ಪುತ್ರಿಯ ವಿರುದ್ಧ ಹಗುರ ಪದ ಬಳಸಿ, ಅಪಪ್ರಚಾರ ಮಾಡುವ ಮೂಲಕ ಬಿಜೆಪಿ ಸೋಲಿಸುವ ಗುರಿ ಈಡೇರಿಸಿಕೊಂಡಿದ್ದು, ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸಲು ನೆರವಾಗಿದ್ದಾರೆ. ಬಿಜೆಪಿ ಸೋಲಿಸುವ ಆಂತರಿಕ ಉದ್ದೇಶದಿಂದ ವಿಜಯಪುರದ ಶಾಸಕ ಹಾವೇರಿ ಜಿಲ್ಲೆಯ ಉಪ ಚುನಾವಣೆಯಲ್ಲೂ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಸೋತಿದೆ. ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲೂ ಈ ಶಾಸಕ ಪ್ರಚಾರ ಮಾಡಿದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಸೋತಿದ್ದು, ಕಾಂಗ್ರೆಸ್ ವಿಜಯ ಸಾಧಿಸಿದೆ.
- ಶಿವಾನಂದ ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವರು ವಿಜಯಪುರ