ಹೊಸಕೋಟೆ: ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ನೀಡಿದಂತಹ ಗ್ಯಾರಂಟಿಗಳನ್ನ ಈಡೇರಿಸಿದ್ದು ಕಾರ್ಯಕರ್ತರು ಧೈರ್ಯವಾಗಿ ಮತ ಕೇಳಿ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಗ್ರಾಪಂ ಸದಸ್ಯ ತಮ್ಮಯ್ಯಗೌಡ ಮಾತನಾಡಿ, ಶರತ್ ಬಚ್ಚೇಗೌಡ ಒಬ್ಬ ಯುವ ಶಾಸಕರಾಗಿದ್ದು ಲೋಕಸಭೆ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವರನ್ನ ಗೆಲ್ಲಿಸಿಕೊಂಡರೆ ಇಬ್ಬರು ಯುವಕರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲಿದ್ದಾರೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಬಿಜೆಪಿ ಕಾರ್ಯಕರ್ತರಾದ ಅರುಣ್ ಕುಮಾರ್, ನಾರಾಯಣಸ್ವಾಮಿ, ರಾಜೇಶ್, ರಾಮಾಂಜಿನಪ್ಪ, ಮುನಿಯಾಂಜಿನಪ್ಪ, ಲಕ್ಷ್ಮಣ್, ಹರೀಶ್ ಸರಿದಂತೆ ಇಪ್ಪತ್ತಕ್ಕೂ ಹೆಚ್ಚಿನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಈ ಸಂಧರ್ಭದಲ್ಲಿ ಮಾಜಿ ತಾಪಂ ಸದಸ್ಯ ರಾಮೇಗೌಡ, ಬಮೂಲ್ ನಿರ್ದೇಶಕ ಎಲ್ಎನ್ಟಿ ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಮಂಡೂರಪ್ಪ, ಮಲ್ಲಿಕಾರ್ಜುನ್, ಎ.ಮುನಿರಾಜು, ಬಚ್ಚೇಗೌಡ, ವಿಜಯಕುಮಾರ್, ಮುನಿವೆಂಕಟಪ್ಪ, ಮಂಜುಳಾ ನಾಗಾರ್ಜುನ, ವೇದಾವತಿ ರಾಮು, ಲಕ್ಷ್ಮೀಸಾಗರ್, ಅಪ್ಪಾಜಿಗೌಡ, ನಾಗರಾಜ್, ನಾರಾಯಣಸ್ವಾಮಿ, ಅನಿಲ್ಕುಮಾರ್, ಲಕ್ಷ್ಮಣ್, ತಮ್ಮೇಗೌಡ ಹಾಜರಿದ್ದರು.
ಫೋಟೋ : 19 ಹೆಚ್ಎಸ್ಕೆ 1ಹೊಸಕೋಟೆ ತಾಲೂಕಿನ ಮಲ್ಲಿಮಾಕನಪುರದಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಶಾಸಕ ಶರತ್ ಬಚ್ಚೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.