ಕನ್ನಡಪ್ರಭ ವಾರ್ತೆ ಬೀದರ್
ನಗರದಲ್ಲಿ ಭಾನುವಾರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕೆಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ರೌಡಿಗಳು, ಗೂಂಡಾಗಳು ಸೇರಿ ದೇಶವಿರೋಧಿ ಘೋಷಣೆ ಕೂಗಿದ್ದಾರೆ. ಅಲ್ಲದೇ ರಾಮನಿಗೆ ಹಾಗೂ ರಾಷ್ಟ್ರಕ್ಕೆ ಅವಮಾನ ಮಾಡುವ ಕೆಲಸ ಕೂಡ ನಡೆದಿದೆ ಎಂದರು.
ಬೆಂಗಳೂರು ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಫೋಟೋ ಪ್ರದರ್ಶಿಸಿರುವುದು ಗಂಭೀರ ವಿಷಯವಾಗಿದ್ದು ಉಮರ್ ಖಾಲಿದ್ ಚಿತ್ರ ಹಿಡಿದು ದೇಶವಿರೋಧಿ ಘೋಷಣೆ ಕೂಗಿದವರ ವಿರುದ್ಧ ಇನ್ನೂ ಕ್ರಮವಾಗಿಲ್ಲ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಸರಿ ಕಂಡರೆ ಉರಿದು ಬೀಳುತ್ತಾರೆ ಎಂದು ಆಂದೋಲಶ್ರೀ ಕಿಡಿಕಾರಿದರು.ದೇಶದ್ರೋಹಿಗಳಿಗೆ ಯಾವುದೇ ಲಾಭವಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಂದೋಲ ಶ್ರೀಗಳು ಆಗ್ರಹಿಸಿದ್ದಾರೆ.
ಏಕನಾಥ ಶಿಂಧೆ ಬಣದ ಶಿವಸೇನೆಯ ಜಿಲ್ಲಾಧ್ಯಕ್ಷರಾಗಿ ಸುಧಾಕರ್ ಬಿರಾದಾರ್ ಅವರನ್ನು ಆಯ್ಕೆಯಾಗಿದ್ದಾರೆ ಎಂದು ಶಿವಸೇನಾದ ರಾಜ್ಯಾಧ್ಯಕ್ಷ ಆಂದೋಲಾ ಶ್ರೀ ಹೇಳಿದರು.
ಶಿವಸೇನಾವು ದೇಶದ 25 ರಿಂದ 26 ರಾಜ್ಯಗಳಲ್ಲಿ ಕಾರ್ಯ ಪ್ರಾರಂಭ ಮಾಡಿದೆ. ಇದರ ಮುಖ್ಯ ಉದ್ದೇಶವೇ ಭ್ರಷ್ಟಾಚಾರವನ್ನು ಅಳಿಸಿ ಅಭಿವೃದ್ಧಿ ಹಾಗೂ ಹಿಂದುತ್ವ ಬೆಳೆಸುವುದಾಗಿದೆ ಎಂದರು.
ಈ ಸಂದರ್ಭದಲ್ಲಿ ಶಿವಸೇನಾದ ನೂತನ ಜಿಲ್ಲಾಧ್ಯಕ್ಷ ಸುಧಾಕರ್ ಬಿರಾದಾರ್, ಅಮೃತ್ ಪಾಟೀಲ್, ಗೋರಕನಾಥ್ ಮಡಿವಾಳ್, ನಾಗನಾಥ್ ವಾಡೆಕರ್, ಸಿಂಧುತಾಯಿ ಮಾನೆ, ನಂದಾತಾಯಿ ಹಾಗೂ ರಾಕೇಶ್ ಜಮಾದಾರ್ ಸೇರಿದಂತೆ ಇತರರು ಇದ್ದರು.