ಮಕ್ಕಳ ವೈಜ್ಞಾನಿಕ ಕೌಶಲಕ್ಕೆ ಸಮನ್ವಯ ಹಬ್ಬ ಸಾಕ್ಷಿ

KannadaprabhaNewsNetwork |  
Published : Sep 12, 2024, 01:59 AM IST
ಪ್ರತಿಭಾವಂತ ಮಕ್ಕಳ ಕಲೆಗೆ ಪ್ರೋತ್ಸಾಹಿಸಲಾಗುವುದು: ಸುನೀಲಗೌಡ ಪಾಟೀಲ್ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಲ್ಲಿರುವ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಬಿ.ಎಂ.ಪಾಟೀಲ ಫೌಂಡೇಶನ್ ವತಿಯಿಂದ ತರಬೇತಿ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಎಸ್.ಎಸ್.ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮನ್ವಯ ಹಬ್ಬ, ಶ್ರೀ ಕೃಷ್ಣ ಜನ್ಮಾಷ್ಠಮಿ, ಫುಡ್ ಫೆಸ್ಟಿವಲ್, ಹೊಸ ಬೋಧನಾ ಕೊಠಡಿಗಳು, ಗಣಿತ, ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಲ್ಲಿರುವ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಬಿ.ಎಂ.ಪಾಟೀಲ ಫೌಂಡೇಶನ್ ವತಿಯಿಂದ ತರಬೇತಿ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.

ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಎಸ್.ಎಸ್.ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮನ್ವಯ ಹಬ್ಬ, ಶ್ರೀ ಕೃಷ್ಣ ಜನ್ಮಾಷ್ಠಮಿ, ಫುಡ್ ಫೆಸ್ಟಿವಲ್, ಹೊಸ ಬೋಧನಾ ಕೊಠಡಿಗಳು, ಗಣಿತ, ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದರು. ಇಲ್ಲಿನ ಮಕ್ಕಳು ತಯಾರಿಸಿರುವ ವಿಜ್ಞಾನ ಮಾದರಿಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶಾಲೆಗಳ ಮಕ್ಕಳಿಗಿಂತಲೂ ಹೆಚ್ಚು ಕೌಶಲ್ಯದಿಂದ ಕೂಡಿವೆ. ವಿದ್ಯಾರ್ಥಿಗಳು ಪ್ರದರ್ಶಿಸಿದ ಶ್ರೀಕೃಷ್ಣ ಜನ್ಮಾಷ್ಠಮಿ ನೃತ್ಯ ಕಂಡು ಮೂಕವಿಸ್ಮಿತನಾದೆ. ಅಲ್ಲದೇ, ಈ ಚಿಣ್ಣರು ಫುಡ್ ಫೆಸ್ಟಿವಲ್‌ನಲ್ಲಿ ತಯಾರಿಸಿರುವ ತರಹೇವಾರಿ ತಿಂಡಿ ತಿನಿಸುಗಳು ಬಹಳ ರುಚಿಕರವಾಗಿದ್ದವು. ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಬಿ.ಎಂ.ಪಾಟೀಲ ಫೌಂಡೇಶನ್ ಮೂಲಕ ತರಬೇತಿ ನೀಡಲಾಗುವುದು. ಈ ಮೂಲಕ ಇಲ್ಲಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗುವುದು. ನಾನು ಬಾಲ್ಯದಲ್ಲಿ ಕಲಿತ ಶಾಲೆ ಈಗ ಇಷ್ಟೊಂದು ಅಭಿವೃದ್ಧಿಯಾಗಿರುವುದು ಸಂತಸ ತಂದಿದೆ. ಈ ಶಾಲೆಯ ಇನ್ನಷ್ಟು ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಇದೇ ವೇಳೆ ಸುನೀಲಗೌಡ ಪಾಟೀಲ ಅವರು ವಿದ್ಯಾರ್ಥಿಗಳು ಫುಡ್ ಫೆಸ್ಟಿವಲ್‌ನಲ್ಲಿದ್ದ ನಾನಾ ಖಾದ್ಯಗಳನ್ನು ಖರೀದಿಸಿ ರುಚಿ ಸವಿದರು.

ಈ ಸಂದರ್ಭದಲ್ಲಿ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ಆಡಳಿತಾಧಿಕಾರಿ ಐ.ಎಸ್.ಕಾಳಪ್ಪನವರ, ಬಿ.ಆರ್.ಪಾಟೀಲ, ಬಿ.ಎಲ್.ಡಿ.ಇ ಫಾರ್ಮಸಿ ಕಾಲೇಜಿನ ಎಚ್‌ಒಡಿ ಡಾ.ಆರ್.ಬಿ.ಕೊಟ್ನಾಳ, ಬಿ.ಎಲ್.ಡಿ.ಇ ಸಂಸ್ಥೆಯ ಕಚೇರಿ ಅಧೀಕ್ಷಕ ಎಸ್.ಎ.ಬಿರಾದಾರ(ಕನ್ನಾಳ), ಎಸ್.ಎಸ್. ಪಿಯು ಕಾಲೇಜಿನ ಪ್ರಾಚಾರ್ಯ ಡಾ.ಗಿರೀಶ ಅಕಮಂಚಿ, ಮುಖ್ಯ ಶಿಕ್ಷಕರಾದ ಸಿದ್ಧು ಬಿರಾದಾರ, ವಿ.ಬಿ.ಪಾಟೀಲ, ಮುಖಂಡರಾದ ಸಿದ್ದು ಗೌಡನವರ, ಚನ್ನಪ್ಪ ವಾರದ ಮುಂತಾದವರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ