ದನದ ಕೊಟ್ಟಿಗೆಯಲ್ಲಿ ದಂಪತಿ ಆತ್ಮಹತ್ಯೆ

KannadaprabhaNewsNetwork |  
Published : Oct 11, 2024, 11:46 PM IST
ಪೊಟೋ೧೦ಸಿಪಿಟಿ೪: ಆತ್ಮಹತ್ಯೆಗೆ ಶರಣಾದ ದಂಪತಿ | Kannada Prabha

ಸಾರಾಂಶ

ಚನ್ನಪಟ್ಟಣ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚನ್ನಪಟ್ಟಣ: ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ರಾಜು(೩೪), ಲಕ್ಷ್ಮೀ(೨೯) ನೇಣಿಗೆ ಶರಣಾದ ದಂಪತಿ. ರಾಜು ಹಾಗೂ ಲಕ್ಷ್ಮೀ 8 ವರ್ಷದ ಹಿಂದೆ ಮದುವೆಯಾಗಿದ್ದು, ಇವರಿಗೆ ಮೂರು ವರ್ಷದ ಗಂಡು ಮಗುವಿದೆ. ದಂಪತಿ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಮನೆಯ ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾಗಿದ್ದು, ಮಗುವಿನ ಅಳು ಕೇಳಿದ ಅಕ್ಕಪಕ್ಕದ ಮನೆಯವರು ಹೋಗಿ ನೋಡಿದಾಗ ಇವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ