ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಕರ್ನಾಟಕ ಸಂಘದ ಆವರಣದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅ.೨೯ ಬೆಳಗ್ಗೆ ೧೦ಕ್ಕೆ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಅಧ್ಯಕ್ಷತೆಯಲ್ಲಿ ರಾಜ್ಯ ಜಲಸಾರಿಗೆ ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಂ ರಾಯಪುರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಕಾರ್ಯಾಧ್ಯಕ್ಷ ಎನ್.ಆರ್.ವಿಶುಕುಮಾರ್ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಮಧ್ಯಾಹ್ನ ೨ರಿಂದ ಗಾಂಧೀಜಿ ಮತ್ತು ಶಿಕ್ಷಣ ವಿಷಯವಾಗಿ ರಾಜ್ಯ ಸಂಪನ್ಮೂಲ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಎಸ್.ತುಕಾರಾಂ, ಗಾಂಧೀಜಿ ಮತ್ತು ಖಾದಿ ವಿಷಯವಾಗಿ ಕಲಾವಿದ, ಬರಹಗಾರ ಕೆ.ಜೆ.ಸಜ್ಜಿದಾನಂದ, ಅಸ್ಪೃಶ್ಯತೆ: ಗಾಂಧೀಜಿ ಮತ್ತು ಅಂಬೇಡ್ಕರ್-ಒಂದು ಅನುಸಂಧಾನ ವಿಷಯವಾಗಿ ತುಮಕೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ನಿತ್ಯಾನಂದ ಬಿ.ಶೆಟ್ಟಿ ವಿಷಯ ಮಂಡನೆ ಮಾಡಲಿದ್ದಾರೆ ಎಂದು ಹೇಳಿದರು.ಅ.೩೦ರ ಬೆಳಗ್ಗೆ ೧೦ ಗಂಟೆಯಿಂದ ಗಾಂಧೀಜಿ ಅವರ ಕನಸಿನ ಭಾರತ ಮತ್ತು ವರ್ತಮಾನ ವಿಚಾರವಾಗಿ ಗೌರಿಬಿದನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಮೇಶ್ಚಂದ್ರ ದತ್ತ, ಗಾಂಧೀಜಿ ಓದು ಮತ್ತು ಬರಹಗಳು ವಿಷಯವಾಗಿ ಚಿಂತಕ ಡಾ.ಕೆ.ಪಿಸುರೇಶ್, ಗಾಂಧೀಜಿ ಮತ್ತು ಅಹಿಂಸೆ ಕುರಿತು ನಿವೃತ್ತ ಪ್ರಾಧ್ಯಾಪಕ ಡಾ.ಮುರಳೀಧರ್, ಗಾಂಧೀಜಿ ಮತ್ತು ತಾಯ್ತನ ಬಗ್ಗೆ ಕವಯತ್ರಿ ಡಾ.ಶುಭಶ್ರೀ ಪ್ರಸಾದ್, ಗಾಂಧೀಜಿ ನಾವೇಕೆ ತಿಳಿಯಬೇಕು? ಎಂಬ ಕುರಿತು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಿ.ಬಿ.ಶಿವರಾಜು ವಿಷಯ ಮಂಡನೆ ಮಾಡಲಿದ್ದಾರೆ ಎಂದು ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಮುಖ್ಯ ಆಯುಕ್ತ ಭಕ್ತವತ್ಸಲ, ಸ್ಕೌಟ್ಸ್ ಅಂಡ್ ಗೈಡ್ಸ್ ತರಬೇತುದಾರೆ ಲತಾ ಇದ್ದರು.