ಕನ್ನಡಪ್ರಭ ವಾರ್ತೆ ಬೆಳಗಾವಿ
ಆದರೆ, ಇದ್ಯಾವುದಕ್ಕೂ ಸೊಪ್ಪು ಹಾಕದ ಡಿಸಿ ರೋಷನ್ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಕಾನೂನಿನ ಚೌಕ್ಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕಿದೆ. ಆದರೆ, ನವೆಂಬರ್ 1ರ ಬದಲಾಗಿ ಬೇರೆ ದಿನ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡಲಾಗುವುದು. ಆದರೆ, ಕರ್ನಾಟಕದ ಐಕ್ಯತೆಗೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಬೆಳಗಾವಿಯಲ್ಲಿ ಗಣೋಶೋತ್ಸವ, ಈದ್ ಮಿಲಾದ್ ಹಬ್ಬವನ್ನು ಸಾಮರಸ್ಯದಿಂದ ಆಚರಿಸಿದ್ದೇವೆ. ನೀವು ಕೂಡ ರಾಜ್ಯೋತ್ಸವ ದಿನ ಹೊರತುಪಡಿಸಿ ಬೇರೆ ದಿನ ಹೋರಾಟ ಮಾಡುವಂತೆ ಎಂಇಎಸ್ ಮುಖಂಡರಿಗೆ ಬುದ್ಧಿವಾದ ಹೇಳಿದರು.
ಜಿಲ್ಲಾಧಿಕಾರಿ ನಡೆಗೆ ಎಂಇಎಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದಾಗ ಗರಂ ಆದ ಜಿಲ್ಲಾಧಿಕಾರಿ ಭಾಷಾ ಸಾಮರಸ್ಯ ಕಾಪಾಡುವುದು ಮುಖ್ಯ. ಪ್ರತಿ ರಾಜ್ಯೋತ್ಸವ ಸೇರಿದಂತೆ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ 2 ಸಾವಿರ ಪ್ರಕರಣ ದಾಖಲಾಗಿವೆ. ನನಗೆ ಜಿಲ್ಲಾಧಿಕಾರಿ ಆಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಿದೆ. ನಾನು ತೆಗೆದುಕೊಳ್ಳುವ ನಿರ್ಧಾರಕ್ಕೆ ನೀವು ಬದ್ಧರಾಗಬೇಕು. ಗಡಿ ವಿವಾದ ಸುಪ್ರೀಂಕೋರ್ಟ್ನಲ್ಲಿದೆ. ಕಾನೂನು ಸುವ್ಯವಸ್ಥೆ ಹಾಳಾದರೆ ಸುಪ್ರೀಂಕೋರ್ಟ್ ನನ್ನನ್ನು ಕರೆಸುತ್ತದೆ. ಹಾಗಾಗಿ, ನಿರ್ಧಾರ ಒಪ್ಪಿಕೊಳ್ಳಬೇಕು ಎಂದು ಎಂಇಎಸ್ ಮುಖಂಡರಿಗೆ ಪಾಠ ಮಾಡಿದರು. ಇದರಿಂದಾಗಿ ತೀವ್ರ ಮುಖಭಂಗ ಅನುಭವಿಸಿದ ಎಂಇಎಸ್ ಮುಖಂಡರು ಬಂದದಾರಿಗೆ ಸುಂಕ ಇಲ್ಲ ಎಂಬಂತೆ ಅಲ್ಲಿಂದ ಕಾಲ್ಕಿತ್ತರು.