ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ಕಲ್ಪಿಸಲು ಆಗ್ರಹ

KannadaprabhaNewsNetwork |  
Published : Mar 15, 2024, 01:22 AM IST
ಯಾದಗಿರಿ ನಗರ ನೂತನ ಪೊಲೀಸ್ ಠಾಣೆ. | Kannada Prabha

ಸಾರಾಂಶ

ಉದ್ಘಾಟನೆಗೆ ಸಜ್ಜಾಗಿ 5 ತಿಂಗಳು ಕಳೆದರೂ ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ನೀಡದ ಸರ್ಕಾರದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

ಯಾದಗಿರಿ: ಉದ್ಘಾಟನೆಗೆ ಸಜ್ಜಾಗಿ 5 ತಿಂಗಳು ಕಳೆದರೂ ನಗರ ಪೊಲೀಸ್ ಠಾಣೆಗೆ ಉದ್ಘಾಟನೆ ಭಾಗ್ಯ ನೀಡದ ಸರ್ಕಾರದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮನಾಯಕ, ಜನಪರ ಕಾಳಜಿ ಮಾಡಬೇಕಾದ ಜನಪ್ರತಿನಿಧಿಗಳು ಪೊಲೀಸ್ ಠಾಣೆ ಬಗ್ಗೆ ಪೊಲೀಸರ ಬಗ್ಗೆಯೇ ಕಾಳಜಿ ಇಲ್ಲದೇ ಇರುವುದು ಈ ಪ್ರಕರಣ ಎತ್ತಿ ತೋರಿಸುತ್ತಿದೆ. ಪೊಲೀಸರು ಕಳೆದ ವರ್ಷದಿಂದ ವಸತಿ ನಿಲಯದಲ್ಲಿ ಠಾಣೆ ನಡೆಸುತ್ತಿದ್ದು, ಇದಕ್ಕಾಗಿ ಪಿಎಸ್‌ಐ ವಸತಿ ಗೃಹವನ್ನೇ ಬಿಟ್ಟುಕೊಟ್ಟಿದ್ದರೂ ಸಂಬಂಧಪಟ್ಟವರು ಕ್ಯಾರೆ ಎನ್ನದಿರುವುದು ನಾಚಿಕೆಗೇಡು ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಿಧ ಭಾಗ್ಯಗಳನ್ನು ಕೊಟ್ಟಿದ್ದೇವೆ ಎನ್ನುವ ಸರ್ಕಾರ ಪೊಲೀಸ್ ಠಾಣೆ ಸಿದ್ಧಗೊಂಡಿದ್ದರೂ ಉದ್ಘಾಟನೆ ಭಾಗ್ಯ ಕೊಡದೇ ನಿರ್ಲಕ್ಷ್ಯವಹಿಸಿರುವುದು ಜನಪರ ಕಾಳಜಿ ಎಷ್ಟು ಎಂಬುದನ್ನು ಎತ್ತಿ ತೋರಿಸುತ್ತಿದೆ ಎಂದು ಟೀಕಿಸಿದ್ದಾರೆ.

ಕೂಡಲೇ ಪೊಲೀಸ್ ಠಾಣೆ ಕಟ್ಟಡ ಲೋಕಾರ್ಪಣೆ ಮಾಡಿ ಪೊಲೀಸರಿಗೆ ಒಪ್ಪಿಸಬೇಕು. ಆ ಮೂಲಕ ಜನಸಾಮಾನ್ಯರಿಗೆ ಪೊಲೀಸ್ ಠಾಣೆಯ ಬಳಕೆಯಾಗುವಂತೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದಲ್ಲದೇ ನೂತನ ಪೊಲೀಸ್ ಠಾಣೆಯ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡಕ್ಕೆ ಆದ್ಯತೆ ನೀಡಬೇಕು. ಹಾಲಿ ಆಂಗ್ಲ ಭಾಷೆಗೆ ಹೆಚ್ಚು ಒತ್ತು ಕೊಟ್ಟಿರುವುದು ನಾಚಿಕೆಗೇಡು ಸಂಗತಿಯಾಗಿದೆ. ಇವೆಲ್ಲವನ್ನು ಸರಿಪಡಿಸಿ ಕೂಡಲೇ ಠಾಣೆಗೆ ಉದ್ಘಾಟನೆ ಭಾಗ್ಯ ಒದಗಿಸಿಕೊಡದಿದ್ದರೆ ಠಾಣೆ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ವಿಶ್ವಾರಾದ್ಯ ದಿಮ್ಮೆ, ಅಂಬ್ರೇಷ್ ಹತ್ತಿಮನಿ, ಅಬ್ದುಲ್ ಚಿಗಾನೂರ, ಸಾಹೇಬಗೌಡ ನಾಯಕ ಗೌಡಗೇರಿ, ವಿಶ್ವರಾಜ ಹೊನಿಗೇರ, ರಮೇಶ ಡಿ.ನಾಯಕ, ಕಾಶಿನಾಥ ನಾನೇಕ ಇನ್ನಿತರರು ಎಚ್ಚರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು