ಕನ್ನಡಪ್ರಭ ವಾರ್ತೆ ದೇವದುರ್ಗ
ಪಟ್ಟಣದ ಜಹೀರುದ್ಧನ್ ದರ್ಗಾ ಆವರಣದಲ್ಲಿ ಹಮ್ಮಿಕೊಂಡಿದ್ದ ಪುರಸಭೆ ಎಸ್ಎಫ್ಸಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ನೆರವೇರಿಸಿ ಮಾತನಾಡಿದ ಅವರು, ರಾಜಕಾಲುವೆ, ಚರಂಡಿ, ಶೌಚಾಲಯ ಸೇರಿದಂತೆ ಇತರೆ ಅಭಿವೃದ್ಧಿಗಾಗಿ ಸಂಬಂಧಪಟ್ಟ ಸಚಿವರಿಗೆ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಕೋಟ್ಯಂತರ ರು. ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿವೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೆ ಮುನ್ನವೇ ಕೆಲ ವಾರ್ಡ್ಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತದೆ ಎಂದರು.
ಪುರಸಭೆ ಸದಸ್ಯರ ನಿಯೋಗ ಕರೆದೊಯ್ದು, ಸಂಬಂಧಪಟ್ಟ ಮಂತ್ರಿಗಳಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸೋಣ ಎಂದರು.ಕೆಲಸ ಕಾರ್ಯಗಳ ನಿಮಿತ್ತ ಪಟ್ಟಣಕ್ಕೆ ಬರುವ ಜನರಿಗೆ ಸಾರ್ವಜನಿಕರ ಶೌಚಾಲಯ ವ್ಯವಸ್ಥೆ ಇಲ್ಲವಾಗಿತ್ತು. ಲಕ್ಷಾಂತರ ರು. ವೆಚ್ಚದಲ್ಲಿ ನಾಲ್ಕು ಕಡೆ ಶೌಚಾಲಯ ನಿರ್ಮಿಸಲು ಚಾಲನೆ ನೀಡಿದ್ದೇನೆ. ಹಂತ ಹಂತವಾಗಿ ಅಭಿವೃದ್ಧಿ ಮಾಡಲು ಪುರಸಭೆ ಸದಸ್ಯರು ಕೈಜೋಡಿಸಬೇಕು ಎಂದರು.
ಜನರು ಕೊಟ್ಟಿರುವ ಅಧಿಕಾರ ಜನರಿಗಾಗಿಯೇ, ಹಗಲು ರಾತ್ರಿ ದುಡಿಯೋಣ. ರಾಜಕೀಯ ಬಿಟ್ಟು, ಅಭಿವೃದ್ಧಿಗೆ ಪಕ್ಷಾತೀತವಾಗಿ ಕೆಲಸ ಮಾಡೋಣ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಶರಣಗೌಡ ಗೌರಂಪೇಟೆ, ಜೆಡಿಎಸ್ ತಾಲೂಕಾಧ್ಯಕ್ಷ ಬುಡ್ಡನಗೌಡ ಮಾತನಾಡಿದರು. ಇದೇ ಸಂದರ್ಭದಲ್ಲಿ ಜಹೀರುದ್ಧನ್ ದರ್ಗಾ ತಾತಾ, ಪುರಸಭೆ ಸದಸ್ಯರು, ಮುಖಂಡರು, ಸಾರ್ವಜನಿಕರು ಇದ್ದರು.