ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದಲ್ಲಿ ಶುಕ್ರವಾರ ಕೋಟೆ ಶ್ರೀ ಮಾರಿಕಾಂಬ ದೇವಿಗೆ ಸ್ವರ್ಣಮುಖ ಹಾಗೂ ಗರ್ಭಗುಡಿಗೆ ರಜತದ್ವಾರ ಸಮರ್ಪಿಸಿ ಅವರು ಆರ್ಶೀವಚನ ನೀಡಿದರು.
ಮಾರಿಕಾಂಬೆ ದೇವಿಯ ಕಣ್ಣು ಉಗ್ರ ಸ್ವರೂಪವಾಗಿರುತ್ತದೆ. ಅಂದರೆ ನಾವು ತಪ್ಪಾಗಿ ವರ್ತಿಸಿದಾಗ ಮಾತ್ರ ಅವಳು ಉಗ್ರದೃಷ್ಟಿ ಬೀರುತ್ತಾಳೆ. ನಾವು ಸರಿದಾರಿಯಲ್ಲಿದ್ದರೆ ಮಾತೃಹೃದಯದಿಂದ ನಮ್ಮೆಲ್ಲರನ್ನು ಆಶೀರ್ವದಿಸುತ್ತಾಳೆ. ದೇವರ ಬಳಿ ನಾವು ಏನನ್ನೂ ಕೇಳಬಾರದು, ಬದಲಾಗಿ ನಾನು ಯಾವುದಕ್ಕೆ ಅರ್ಹನಿದ್ದೇನೋ ಅದೆಲ್ಲವನ್ನು ಅನುಗ್ರಹಿಸು ಎಂದು ಬೇಡಿಕೊಂಡರೆ ದೇವಿ ಸಂತುಷ್ಟಳಾಗಿ ಎಲ್ಲವನ್ನೂ ದಯಪಾಲಿಸುತ್ತಾಳೆ ಎಂದು ಹೇಳಿದರು.ಗ್ರಾಮೀಣ ಭಾಗದಲ್ಲಿ ಜಗಳಗಳಾದಾಗ ಅಥವಾ ವೈಮನಸ್ಸು ಉಂಟಾದಾಗ ಒಬ್ಬರಿಗೊಬ್ಬರು ನಿನಗೆ ಮುಂದೆ ಇದೆ ಮಾರಿಹಬ್ಬ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಅಂದರೆ ಮಾರಿಹಬ್ಬದಲ್ಲಿ ನಾವು ಬಲಿಯನ್ನು ಕೊಡುತ್ತೇವೆ. ಅದೇ ರೀತಿ ನಮ್ಮಲ್ಲಿರುವ ಅಧರ್ಮ, ದ್ವೇಷ, ಅಸೂಯೆಗಳನ್ನು ತೆಗೆದುಹಾಕುವುದಕ್ಕೆ ಮಾರಿಹಬ್ಬದ ಉಲ್ಳೇಖವನ್ನು ಮಾಡುತ್ತಾರೆ ಎಂದು ಹೇಳಿದರು.
ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ದೇವಸ್ಥಾನದ ಆಡಳಿತ ಮಂಡಳಿ ಕೇವಲ ಮಾರಿಹಬ್ಬಕ್ಕೆ ಮಾತ್ರ ಸೀಮಿತವಾಗಿಲ್ಲ. ವರ್ಷಪೂರ್ತಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುತ್ತಲೇ ಇರುತ್ತಾರೆ. ಜೊತೆಗೆ ಭಕ್ತಾಧಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ನಿಜಕ್ಕೂ ಆಡಳಿತ ಮಂಡಳಿಯ ಕಾರ್ಯವೈಖರಿ ಶ್ಲಾಘನೀಯ ಎಂದರು.
ಮೊದಲು ಈ ಸ್ಥಳದಲ್ಲಿ ಮಾರಿಗದ್ದುಗೆ ಮಾತ್ರ ಇತ್ತು. ಇದೀಗ ಆಡಳಿತ ಮಂಡಳಿಯವರ ಪರಿಶ್ರಮ, ಕಾರ್ಯವೈಖರಿಯಿಂದ ಸುಂದರವಾದ ದೇವಸ್ಥಾನವಾಗಿದೆ. ಪ್ರತಿನಿತ್ಯ ಶ್ರದ್ಧಾ-ಭಕ್ತಿಯ ಕೇಂದ್ರವಾಗಿ ರೂಪುಗೊಂಡಿದೆ.