ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಆರ್ಗ್ಯಾನಿಕ್ ಪೇಂಟ್ನ ಉದ್ಯಮಿ ಕೃಷ್ಣ ಪ್ರಸಾದ್ ಅವರು, ಶಾಲೆ ಕಟ್ಟಡ ನಿರ್ಮಿಸಲು ಮುಂದಾಗಿದ್ದು, ಶಿಥಿಲಗೊಂಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗಾಗಿ ತಮ್ಮ ಸ್ವಂತ ಖರ್ಚಿನಿಂದ ಸುಮಾರು 30 ಲಕ್ಷ ರು. ವೆಚ್ಚದಲ್ಲಿ ತಮ್ಮ ಸ್ವ ಇಚ್ಚೆಯಿಂದ ಕಟ್ಟಡದ ನೆಲ ಅಂತಸ್ತು ಹಾಗೂ ಮೇಲಂತಸ್ತು ಸೇರಿ 5 ಕೊಠಡಿಯನ್ನು ನಿರ್ಮಿಸಿಕೊಡುತ್ತಿದ್ದಾರೆ.
ಗ್ರಾಮಸ್ಥರು ಜೊತೆಗೂಡಿ ಕೃಷ್ಣಪ್ರಸಾದ್ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಪೀಕಾರ್ಡ್ ಬ್ಯಾಂಕ್ನ ಮಾಜಿ ಅಧ್ಯಕ್ಷ ಗುರು ಪ್ರಸಾದ್, ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಮುರುಳಿ, ಟಿಎಪಿಸಿಎಂಎಸ್ ನಿರ್ದೇಶಕ ಶ್ರೀಕಂಠ, ಮಹದೇವು, ತಾಪಂ ಮಾಜಿ ಅಧ್ಯಕ್ಷ ಸಂದೇಶ್, ಡಾ. ನಾಗರಾಜು, ರಾಂಪುರ ಪ್ರೀತು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.ಪುರಸಭೆ ಪ್ರಭಾರ ಮುಖ್ಯಾಧಿಕಾರಿಯಾಗಿ ಸತೀಶ್ ನೇಮಕಶ್ರೀರಂಗಪಟ್ಟಣ:
ಈ ಹಿಂದೆ ಪ್ರಭಾರ ಮುಖ್ಯಾಧಿಕಾರಿಯಾಗಿದ್ದ ರಾಜಣ್ಣ ಅವರ ಸೇವೆಯನ್ನ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಹಿಂಪಡೆದು, ತೆರವಾದ ಹುದ್ದೆಗೆ ಬಿ.ಜಿ ಸತೀಶ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ. ಮುಂದಿನ ಅದೇಶದವರೆಗೆ ತಾತ್ಕಾಲಿಕವಾಗಿ ಪುರಸಭೆ ಮುಖ್ಯಾಧಿಕಾರಿಯ ಹುದ್ದೆಯ ಪ್ರಭಾರದಲ್ಲಿರಿಸಿ, ಕರ್ತವ್ಯ ನಿರ್ವಹಿಸಲು ಸರ್ಕಾರದ ಅಧೀನ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಇವರ ಅದೇಶದ ಮೇರೆಗೆ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶರು ಆದೇಶಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಅಸೋಸಿಯೇಷನ್ ಆಫ್ ಅಲಯನ್ಸ್ ಇಂಟರ್ನ್ಯಾಷನಲ್ ಕ್ಲಬ್ಸ್ ಮತ್ತು ದ್ವಾರಕನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಸಂಘಟಿಸಿರುವ ಈ ಕರ್ಯಕ್ರಮವನ್ನು ಅಂದು ಸಂಜೆ 7 ಗಂಟೆಗೆ ಅಲಯನ್ಸ್ ಇಂಟರ್ ನ್ಯಾಷನಲ್ ಕ್ಲಬ್ಸ್ ಸೌತ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು ಉದ್ಘಾಟಿಸುವರು. ಎರಡನೇ ಉಪ ರಾಜ್ಯಪಾಲ ಕೆ.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು.