ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 17 ವರ್ಷಗಳ ಹಿಂದೆ ಶಿವಪ್ಪನಾಯಕ ಮಾರುಕಟ್ಟೆಯ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಅಲ್ಲಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದ 117 ಹೂವಿನ ವ್ಯಾಪಾರಿಗಳು ಹಾಗೂ ಕೆಲವು ಗ್ರಂಥಿಕೆ ವ್ಯಾಪಾರಿಗಳನ್ನು ಅಲ್ಲಿಂದ ತೆರವುಗೊಳಿಸಲಾಗಿತ್ತು. ಈಗ ಅವರಿಗೆ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡದಲ್ಲಿ ಅವಕಾಶ ಕಲ್ಪಿಸುವುದರ ಮೂಲಕ ನೆನೆಗುದಿಗೆ ಬಿದ್ದಿದ್ದ ಹೂವಿನ ವ್ಯಾಪಾರಿಗಳ ಬಹುವರ್ಷಗಳ ಕನಸನ್ನು ಮಹಾನಗರಪಾಲಿಕೆ ನನಸಾಗಿಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಬುಧವಾರ ಆದೇಶ ನೀಡಿದ್ದಾರೆ ಎಂದು ಹೇಳಿದರು.
ಅಂದಿನ ನಗರಸಭೆ, ಜಿಲ್ಲಾಧಿಕಾರಿಗಳು, ರಾಜ್ಯ ಸರ್ಕಾರ ಹಾಗೂ ಅಂದಿನ ಶಾಸಕರೆಲ್ಲರೂ ಸೇರಿ ಈ ಹೂವಿನ ವ್ಯಾಪಾರಿಗಳಿಗೆ ಪುನರ್ವಸತಿ ಕಲ್ಪಿಸುವ ದೃಷ್ಟಿಯಿಂದ ಒಂದು ಹೊಸ ರೂಪಕೊಡುವ ಕೆಲಸ ಮಾಡಲಾಗಿತ್ತು. ಅವರಿಗೆ ಬದಲಿ ವ್ಯವಸ್ಥೆ ಕೊಡುವ ನಿರ್ಧಾರವನ್ನು ಜಿಲ್ಲಾಧಿಕಾರಿಗಳು ಬಾಡಿಗೆ ನಿಗದಿ ಮಾಡಿ, ಡಿ.31ರಂದು ಆದೇಶ ಮಾಡುವುದರೊಂದಿಗೆ ಸಾಕಾರಗೊಂಡಿದೆ. ಅಂದಿನ ಜಿಲ್ಲಾಧಿಕಾರಿಯಾಗಿದ್ದ ಪಂಕಜ್ಕುಮಾರ್ ಪಾಂಡೆ ಅವರ ಅವಧಿಯಲ್ಲಿ ಈ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸುವ ಕಾರ್ಯ ಆರಂಭವಾಗಿತ್ತು. ಹಳೇ ಕಟ್ಟಡದಲ್ಲಿ ಹೂವಿನ ವ್ಯಾಪಾರಿಗಳಲ್ಲದೆ, ಬೇರೆ ಬೇರೆ ಬ್ಯಾಂಕುಗಳು, ರಾಜಕೀಯ ಪಕ್ಷ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳೂ ಇದ್ದವು. ಇವರಿಗೆ ಗಾರ್ಡನ್ ಏರಿಯಾದ ಪಾಲಿಕೆಯ ಹೊಸ ವಾಣಿಜ್ಯ ಸಂಕೀರ್ಣದಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದರು.ಹೂವಿನ ವ್ಯಾಪಾರಿಗಳಿಗೆ 12 ವರ್ಷದ ಒಡಂಬಡಿಕೆಯೊಂದಿಗೆ ಹೊಸ ಕಟ್ಟಡದಲ್ಲಿ ಮಳಿಗೆ ನೀಡಲಾಗುತ್ತದೆ. ಮಾಸಿಕ 5337 ರು. ಬಾಡಿಗೆ ಹಾಗೂ 1,15,351 ರು. ಠೇವಣಿ ಪಡೆದುಕೊಂಡು ಮಳಿಗೆ ನೀಡಲಾಗುವುದು. 12 ವರ್ಷಗಳ ನಂತರ ಅವರು ಅಂದಿನ ನಿಯಮದ ಪ್ರಕಾರ ಬಾಡಿಗೆ ನವೀಕರಣ ಮಾಡಿಕೊಳ್ಳಬೇಕಾಗುತ್ತದೆ ಎಂದರು.
ಗೌರವ ಲಾಡ್ಜ್ ಬಳಿ ಇರುವ ಪಾಲಿಕೆ ಕಟ್ಟಡದಲ್ಲಿ ಹಿಂದಿನ ಮಾರುಕಟ್ಟೆ ಕೆಡವಿದಾಗ ಅಲ್ಲಿದ್ದ ಸಂಘ-ಸಂಸ್ಥೆಗಳ ಕಚೇರಿಗಳಿಗೆ ಈ ಕಟ್ಟಡದಲ್ಲಿ ಅವಕಾಶ ನೀಡಲಾಗುವುದು ಎಂದರು.
ಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ರೆಡ್ಡಿ, ಪ್ರಮುಖರಾದ ಜ್ಞಾನೇಶ್ವರ, ದೀನ್ದಯಾಳ್, ಶ್ರೀನಾಗ, ಮುರಳಿ, ವಿಶ್ವನಾಥ್, ಎನ್.ಜೆ. ನಾಗರಾಜ್ ಇದ್ದರು.