ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘವು ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸುತ್ತ ಬಂದಿದೆ. ಈ ಬಾರಿಯೂ ಕೂಡ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.೭೫ಕ್ಕೂ ಹೆಚ್ಚು ಅಂಕ ಪಡೆದ ನಗರ ಮಟ್ಟದ ಮತ್ತು ಸದಸ್ಯರ ಮಕ್ಕಳು ಅರ್ಜಿ ಹಾಕಲು ಅರ್ಹರಾಗಿರುತ್ತಾರೆ. ಇವರು ಜು.20ರೊಳಗೆ ತಮ್ಮ ಅರ್ಜಿಗಳನ್ನು ಸಮಾಜದ ಕಚೇರಿಗೆ ತಲುಪಿಸಬೇಕು ಎಂದರು.
ಹಾಗೆಯೇ ಸಾಧನೆ ಮಾಡಿದವರನ್ನು ಕೂಡ ಸನ್ಮಾನಿಸಲಾಗುವುದು. ನಾವು ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಕೂಡ ಸನ್ಮಾನಿಸುತ್ತಿದ್ದೇವೆ. ಈ ಎಲ್ಲ ಕಾರ್ಯಕ್ರಮಗಳಿಗೆ ಸ್ವಾಮೀಜಿಗಳು, ಗಣ್ಯರು ಆಗಮಿಸುತ್ತಾರೆ ಎಂದರು.ಸಂಘದ ಗೌರವ ಕಾರ್ಯದರ್ಶಿ ಎಸ್.ಪಿ.ದಿನೇಶ್ ಮಾತನಾಡಿ, ನಮ್ಮ ಸಂಘವು ಹಲವು ಶೈಕ್ಷಣಿಕ ಯೋಜನೆಗಳನ್ನು ರೂಪಿಸಿದೆ. ಈಗಾಗಲೇ ಗಾಡಿಕೊಪ್ಪದ ಬಳಿ ಸುಮಾರು ೩ ಕೋಟಿ ರು. ವೆಚ್ಚದಲ್ಲಿ ಹೈಟೆಕ್ ಶಾಲೆಯನ್ನು ನಿರ್ಮಿಸಲಾಗುವುದು. ಇದು ವಸತಿ ಶಾಲೆಯೂ ಆಗುತ್ತದೆ. ಜುಲೈನಲ್ಲಿ ಶಂಕು ಸ್ಥಾಪನೆ ಇದ್ದು ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಆರಂಭಗೊಳ್ಳುತ್ತದೆ ಎಂದರು.
ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷೆ ಎಚ್.ಶಾಂತ ಆನಂದ್, ಪದಾಧಿಕಾರಿಗಳಾದ ಕೆ.ಎಸ್.ತಾರಾನಾಥ್, ಬಳ್ಳಕೆರೆ ಸಂತೋಷ್, ಡಾ.ಸಿ.ರೇಣುಕಾರಾಧ್ಯ, ಎಸ್.ಎನ್. ಮಹಾಲಿಂಗಯ್ಯಶಾಸ್ತ್ರಿ , ಮೋಹನ್ಕುಮಾರ್, ಟಿ.ಬಿ.ಜಗದೀಶ್, ಪಿ.ರುದ್ರೇಶ್, ಎಂ.ಆರ್. ಪ್ರಕಾಶ್, ಸಿ.ಮಹೇಶ್ಮೂರ್ತಿ, ಜೆ.ಆರ್.ಮಂಜುನಾಥ್, ಚನ್ನಬಸಪ್ಪ, ಹಾಲನಗೌಡರು ಸೇರಿದಂತೆ ಹಲವರಿದ್ದರು.