27ಕ್ಕೆ ಬಿ.ಎಸ್.ಯಡಿಯೂರಪ್ಪನವರಿಗೆ ಸನ್ಮಾನ ಕಾರ್ಯಕ್ರಮ

KannadaprabhaNewsNetwork |  
Published : Jul 10, 2025, 01:46 AM IST
ಪೋಟೋ: 09ಎಸ್‌ಎಂಜಿಕೆಪಿ04 ಶಿವಮೊಗ್ಗದ ಪತ್ರಿಕಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿದರು. | Kannada Prabha

ಸಾರಾಂಶ

ಶ್ರೀ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘದ ವತಿಯಿಂದ ಜು.27 ರಂದು ಜೆ.ಎಚ್.ಬಡಾವಣೆಯಲ್ಲಿರುವ ವೀರಶೈವ ಸಾಂಸ್ಕೃತಿಕ ಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶ್ರೀ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘದ ವತಿಯಿಂದ ಜು.27 ರಂದು ಜೆ.ಎಚ್.ಬಡಾವಣೆಯಲ್ಲಿರುವ ವೀರಶೈವ ಸಾಂಸ್ಕೃತಿಕ ಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘವು ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸುತ್ತ ಬಂದಿದೆ. ಈ ಬಾರಿಯೂ ಕೂಡ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.೭೫ಕ್ಕೂ ಹೆಚ್ಚು ಅಂಕ ಪಡೆದ ನಗರ ಮಟ್ಟದ ಮತ್ತು ಸದಸ್ಯರ ಮಕ್ಕಳು ಅರ್ಜಿ ಹಾಕಲು ಅರ್ಹರಾಗಿರುತ್ತಾರೆ. ಇವರು ಜು.20ರೊಳಗೆ ತಮ್ಮ ಅರ್ಜಿಗಳನ್ನು ಸಮಾಜದ ಕಚೇರಿಗೆ ತಲುಪಿಸಬೇಕು ಎಂದರು.

ಹಾಗೆಯೇ ಸಾಧನೆ ಮಾಡಿದವರನ್ನು ಕೂಡ ಸನ್ಮಾನಿಸಲಾಗುವುದು. ನಾವು ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಕೂಡ ಸನ್ಮಾನಿಸುತ್ತಿದ್ದೇವೆ. ಈ ಎಲ್ಲ ಕಾರ್ಯಕ್ರಮಗಳಿಗೆ ಸ್ವಾಮೀಜಿಗಳು, ಗಣ್ಯರು ಆಗಮಿಸುತ್ತಾರೆ ಎಂದರು.

ಸಂಘದ ಗೌರವ ಕಾರ್ಯದರ್ಶಿ ಎಸ್.ಪಿ.ದಿನೇಶ್ ಮಾತನಾಡಿ, ನಮ್ಮ ಸಂಘವು ಹಲವು ಶೈಕ್ಷಣಿಕ ಯೋಜನೆಗಳನ್ನು ರೂಪಿಸಿದೆ. ಈಗಾಗಲೇ ಗಾಡಿಕೊಪ್ಪದ ಬಳಿ ಸುಮಾರು ೩ ಕೋಟಿ ರು. ವೆಚ್ಚದಲ್ಲಿ ಹೈಟೆಕ್ ಶಾಲೆಯನ್ನು ನಿರ್ಮಿಸಲಾಗುವುದು. ಇದು ವಸತಿ ಶಾಲೆಯೂ ಆಗುತ್ತದೆ. ಜುಲೈನಲ್ಲಿ ಶಂಕು ಸ್ಥಾಪನೆ ಇದ್ದು ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಆರಂಭಗೊಳ್ಳುತ್ತದೆ ಎಂದರು.

ಕಾರ್ಯಕ್ರಮದ ದಿನವೇ ಸದಸ್ಯತ್ವವನ್ನು ನವೀಕರಣ ಮಾಡಲಾಗುವುದು. ಈಗಾಗಲೇ 100 ರು. ಕೊಟ್ಟು ಸದಸ್ಯರಾದವರು ಮತ್ತೆ 100 ರು. ಕೊಟ್ಟು ನವೀಕರಣ ಮಾಡಬೇಕಾಗುತ್ತದೆ. ಹೊಸದಾಗಿ ನವೀಕರಣ ಮಾಡುವವರು 200 ರು. ಗಳನ್ನು ಪಾವತಿ ಮಾಡಿ ಸದಸ್ಯತ್ವ ಪಡೆಯಬಹುದು ಎಂದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷೆ ಎಚ್.ಶಾಂತ ಆನಂದ್, ಪದಾಧಿಕಾರಿಗಳಾದ ಕೆ.ಎಸ್.ತಾರಾನಾಥ್, ಬಳ್ಳಕೆರೆ ಸಂತೋಷ್, ಡಾ.ಸಿ.ರೇಣುಕಾರಾಧ್ಯ, ಎಸ್.ಎನ್. ಮಹಾಲಿಂಗಯ್ಯಶಾಸ್ತ್ರಿ , ಮೋಹನ್‌ಕುಮಾರ್, ಟಿ.ಬಿ.ಜಗದೀಶ್, ಪಿ.ರುದ್ರೇಶ್, ಎಂ.ಆರ್. ಪ್ರಕಾಶ್, ಸಿ.ಮಹೇಶ್‌ಮೂರ್ತಿ, ಜೆ.ಆರ್.ಮಂಜುನಾಥ್, ಚನ್ನಬಸಪ್ಪ, ಹಾಲನಗೌಡರು ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಸಿದ್ದುಗೆ ಇದು ಕೊನೆ ಅಧಿವೇಶನ: ವಿಜಯೇಂದ್ರ
ಬಿವೈವಿ ಕಲೆಕ್ಷನ್‌ ಕಿಂಗ್‌, ಕಲೆಕ್ಷನ್‌ ಬಿಚ್ಚಿಡ್ಲಾ? : ಡಿಕೆ