ಸಹೋದರತ್ವ ಬೆಳೆಸಿಕೊಳ್ಳುವ ಸಂದೇಶ ಸಾರುವ ಹಬ್ಬ: ಧರ್ಮಗುರು ಗುಲಾಂ ಮಹ್ಮದ್ ಸಿದ್ಧಿಕಿ

KannadaprabhaNewsNetwork |  
Published : Jun 08, 2025, 02:17 AM IST
ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಬಳ್ಳಾರಿಯ ಈದ್ಗಾ ಮೈದಾನದಲ್ಲಿ ಶನಿವಾರ ಜರುಗಿದ ಸಾಮೂಹಿಕ ಪ್ರಾರ್ಥನೆ ವೇಳೆ ಧರ್ಮಗುರು ಗುಲಾಂ ಮಹ್ಮದ್ ಸಿದ್ಧಿಕಿ ಅವರು ಹಬ್ಬದ ಮಹತ್ವ ಹಾಗೂ ದಾನ-ಧರ್ಮದ ಮಹತ್ವ ಕುರಿತು ತಿಳಿಸಿದರು. | Kannada Prabha

ಸಾರಾಂಶ

ತ್ಯಾಗ, ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಶ್ರದ್ಧಾಭಕ್ತಿಯಿಂದ ಶನಿವಾರ ಆಚರಿಸಿದರು.

ಕನ್ನಡಪ್ರಭ ವಾರ್ತೆ ಬಳ್ಳಾರಿ

ತ್ಯಾಗ, ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಶ್ರದ್ಧಾಭಕ್ತಿಯಿಂದ ಶನಿವಾರ ಆಚರಿಸಿದರು.

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಬಡವರಿಗೆ ಆಹಾರ ಧಾನ್ಯಗಳ ವಿತರಣೆ ಸೇರಿದಂತೆ ನಾನಾ ಹಬ್ಬದ ವಿಧಿ ವಿಧಾನಗಳು ನಡೆದವು.

ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಸ್ಲಿಂ ಸಮಾಜದವರು ಪಾಲ್ಗೊಂಡು ಅಲ್ಲಾಹನ ಕೃಪೆಗೆ ಪಾತ್ರರಾದರು.

ನಗರದ ಎಪಿಎಂಸಿ ಹಾಗೂ ಬೆಂಗಳೂರು ರಸ್ತೆಯ ಈದ್ಗಾ ಮೈದಾನ ಸೇರಿದಂತೆ ನಗರದ ಮಸೀದಿಗಳಲ್ಲಿ ಸಹ ಸಾಮೂಹಿಕ ಪ್ರಾರ್ಥನೆಗಳು ಜರುಗಿದವು.

ಇಲ್ಲಿನ ಈದ್ಗಾ ಮೈದಾನದಲ್ಲಿ ಜರುಗಿದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಧರ್ಮಗುರು ಗುಲಾಂ ಮಹ್ಮದ್ ಸಿದ್ಧಿಕಿ, ಹಬ್ಬದ ಮಹತ್ವ ಹಾಗೂ ದಾನ-ಧರ್ಮದ ಮಹತ್ವ ಕುರಿತು ತಿಳಿಸಿದರು. ದೈವನಿಷ್ಠೆ ತ್ಯಾಗದ ಗುಣಗಳಿಂದ ಈ ಹಬ್ಬ ಬೆಸೆದುಕೊಂಡಿದೆ. ಮಾನವೀಯ ಮೌಲ್ಯಗಳು ಹಾಗೂ ಸೋದರತ್ವವನ್ನು ಬೆಳೆಸಿಕೊಳ್ಳುವ ಸಂದೇಶವನ್ನು ಬಕ್ರೀದ್ ಸಾರುತ್ತದೆ.

ಮುಸ್ಲಿಂ ಬಾಂಧವರು ದಾನ ಧರ್ಮದಲ್ಲಿ ನಿರಂತರ ತೊಡಗಿಸಿಕೊಳ್ಳುವ ಮೂಲಕ ದೈವನ ಕೃಪೆಗೆ ಪಾತ್ರರಾಗಬೇಕು. ನೆರೆಹೊರೆಯವರ ಜೊತೆ ಸೌಹಾರ್ದತೆಯ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರಲ್ಲದೆ, ನಾಲ್ಕು ಸಾವಿರ ವರ್ಷಗಳಿಗೂ ಹಿಂದೆ ಜೀವಿಸಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗ ಹಾಗೂ ಭಕ್ತಿಯ ಕುರಿತು ತಿಳಿಸಿದರು.

ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್, ನಗರ ಶಾಸಕ ನಾರಾ ಭರತ್ ರೆಡ್ಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಮುಖಂಡರಾದ ಹುಮಾಯೂನ್ ಖಾನ್ ಮತ್ತಿತರರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಹಬ್ಬದ ಹಿನ್ನೆಲೆ ಹಿರಿಯರು, ಪುರುಷರು ಹೊಸಬಟ್ಟೆ ತೊಟ್ಟು ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''