ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಾಡದೇವಿ ಚಾಮುಂಡೇಶ್ವರಿಯ ಅಂಬಾರಿ ಹೊತ್ತ ಜಂಬೂ ಸವಾರಿ ಶಿವಮೊಗ್ಗದ ಕೋಟೆ ದೇವಾಲಯದಿಂದ ಫ್ರೀಡಂ ಪಾರ್ಕ್ವರೆಗೆ ಯಶಸ್ವಿಯಾಗಿ ಸಾಗಿತು.
ಮೈಸೂರು ದಸರಾದಂತೆಯೇ ವಿಜೃಂಭಣೆಯಿಂದ ಆಚರಿಸಲ್ಪಡುವ ಶಿವಮೊಗ್ಗ ದಸರಾದಲ್ಲಿ ಚಾಮುಂಡೇಶ್ವರಿಯನ್ನು ಹೊತ್ತು ಪ್ರಮುಖ ಮಾರ್ಗದಲ್ಲಿ ಸಾಗುವ ಅಂಬಾರಿ ಮೆರವಣಿಗೆಯನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಜನರು ಉತ್ಸುಕರಾಗಿದ್ದರು. ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಸಂಪ್ರದಾಯ ಬಿಂಬಿಸುವ ಮೆರವಣಿಗೆಯಲ್ಲಿ ಸಾವಿರಾರು ಜನರು ಹೆಜ್ಜೆ ಹಾಕಿದರು.ಕಳೆದೊಂದು ವಾರದಿಂದ ನಗರದಲ್ಲಿ ತಾಲೀಮು ಪಡೆದಿದ್ದ ಸಕ್ರೆಬೈಲು ಆನೆ ಬಿಡಾರದ ಗಜ ಪಡೆ ಮೆರವಣಿಗೆಯ ಮೆರುಗು ಹೆಚ್ಚಿಸಿದವು.
ಜಿಟಿ ಜಿಟಿ ಮಳೆಯ ನಡುವೆ ರಾಜ್ಯದ ಎರಡನೇ ದಸರಾ ಖ್ಯಾತಿಯ ಶಿವಮೊಗ್ಗ ದಸರಾ ಜಂಬೂ ಸವಾರಿ, ವಿಜಯದಶಮಿ ದಿನ ಗುರುವಾರ ಅದ್ಧೂರಿ ಚಾಲನೆ ದೊರೆಯಿತು.
ಕೋಟೆ ಆಂಜನೇಯ ದೇವಸ್ಥಾನದ ಎದುರಿನ ಕಮಾನು ಪಕ್ಕದ ಅಟ್ಟಣಿಗೆಯ ಮೇಲೆ ನಿಂತು ಅಂಬಾರಿ ಮೇಲಿದ್ದ ಚಾಮುಂಡೇಶ್ವರಿ ದೇವಿಗೆ ಹೂವು ಅರ್ಪಿಸಿದ ಸಚಿವ ಮಧು ಬಂಗಾರಪ್ಪ ಜಿಲ್ಲೆಯ ಜನರ ಪರವಾಗಿ ದೇವರಿಗೆ ಗೌರವ ಸಮರ್ಪಿಸಿದರು.
ಮಧ್ಯಾಹ್ನ 2.30ಕ್ಕೆ ಜಂಬೂ ಸವಾರಿ ಹೊರಡಬೇಕಿತ್ತು. ಆದರೆ, ಮಳೆಯ ಕಾರಣ ತಡವಾಯಿತು. 3 ಗಂಟೆಗೆ ಆರಂಭವಾಯಿತು. 450 ಕೆ.ಜಿ ತೂಕದ ಬೆಳ್ಳಿಯ ಮಂಟಪ ಹಾಗೂ ಚಾಮುಂಡೇಶ್ವರಿಯ ಪುತ್ಥಳಿಯನ್ನು ಬೃಹತ್ ಕ್ರೇನ್ ಬಳಸಿ ಆನೆ ಸಾಗರನ ಬೆನ್ನಿನ ಮೇಲೆ ಪ್ರತಿಷ್ಠಾಪಿಸಲಾಯಿತು.
200ಕ್ಕೂ ಉತ್ಸವ ಮೂರ್ತಿಗಳು:
ಅಂಬು ಛೇದನ: ಹತ್ತು ದಿನಗಳ ಕಾಲ ನಡೆದ ‘ಶಿವಮೊಗ್ಗ ದಸರಾ’ಗೆ ಅಲ್ಲಮಪ್ರಭು ಮೈದಾನದಲ್ಲಿ ತಹಸೀಲ್ದಾರ್ ರಾಜೀವ್ ಅಂಬು ಕಡಿಯುವ ಮೂಲಕ ಸಮಾರೋಪಗೊಳಿಸಿದರು.
ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ಪಿ ಜಿ.ಕೆ.ಮಿಥುನ್ಕುಮಾರ್, ಸಿಇಒ ಎನ್.ಹೇಮಂತ್, ಮಹಾ ನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಹಾಗೂ ಮಾಜಿ ಸದಸ್ಯರು ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
----------------------------------