ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಕರಿ ಹರಿಯುವ ಸ್ಥಳದಲ್ಲಿ ರೈತ ಬಾಂಧವರು, ಜನರು ಎತ್ತು- ಕರುಗಳನ್ನು ಒಂದು ಬದಿಯಿಂದ ಇನ್ನೊಂದು ಬದಿಗೆ ಓಡಿಸಿ ಕರಿ ಹರಿಯುವ ಸಂಪ್ರದಾಯ ನೆರವೇರಿಸಿದರು. ಈ ವೇಳೆ ಎತ್ತರಕ್ಕೆ ಕಟ್ಟಿರುವ ಬೇವಿನ ತಪ್ಪಲು, ಕೊಬ್ಬರಿ ಬಟ್ಟಲು, ಬಾಳೆಹಣ್ಣು ಪಡೆಯಲು ಮುಗಿಬಿದ್ದಿದ್ದರು.
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಗುರ್ಜಿ ಕಟ್ಟಿ ಹತ್ತಿರ ಮೊದಲು ಎತ್ತುಗಳನ್ನು ಓಡಿಸುವ ಮೂಲಕ ಕರಿ ಹರಿದು ರೈತ ಬಾಂಧವರು ಸಂಭ್ರಮಿಸಿದರು. ಕರಿ ಹರಿದ ನಂತರ ಎತ್ತುಗಳನ್ನು ಮೆರವಣಿಗೆ ಮೂಲಕ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಬಸವೇಶ್ವರ ವೃತ್ತದ ಮೂಲಕ ಹಾಯ್ದು ರೈತರ ಮನೆಗೆ ಹೋದಾಗ ಆರತಿ ಮಾಡಿ ಮನೆಗೆ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು.ಡಂಬಳ, ಕಾಂತಪ್ಪ ರೆಡ್ಡರ, ವಿರೇಶ ಹಿರೇಮಠ, ಮಂಜು ಹಾರಿವಾಳ, ಸಂತೋಷ ಕೂಡಗಿ, ಅರವಿಂದ ಗೊಳಸಂಗಿ, ಬೀರಪ್ಪ ಪೂಜಾರ, ಸಿದ್ದು ಶೆಂಡೆ, ಮುತ್ತು ಪೂಜಾರಿ, ರಮೇಶ ಖ್ಯಾಡದ, ಚಂದ್ರಶೇಖರ ಗೊಳಸಂಗಿ ಇತರರು ಇದ್ದರು.
ಪಟ್ಟಣದ ಸಂಗೊಳ್ಳಿ ರಾಯಣ್ಣ ನಗರದ ಯಲ್ಲಾಲಿಂಗ ದೇವಸ್ಥಾನದ ಮುಂಭಾಗ ಎತ್ತುಗಳನ್ನು ಓಡಿಸುವ ಮೂಲಕ ಕರಿ ಹರಿಯಲಾಯಿತು. ನಂತರ ಯಲ್ಲಾಲಿಂಗ ದೇವಸ್ಥಾನದ ಆವರಣದಲ್ಲಿ ಕಲ್ಲು-ಗುಂಡುಗಳನ್ನು ಎತ್ತಿ ಪ್ರದರ್ಶನ ಮಾಡಿದರು. ಕರಿ ಹರಿಯುವದನ್ನು ನೋಡಲು ಅಪಾರ ಸಂಖ್ಯೆಯ ಜನರು ಆಗಮಿಸಿದ್ದರು.