ಹಾರೋಹಳ್ಳಿ: ಹಣಕಾಸಿನ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಕೊಲೆಗೈದು ಶವವನ್ನು ಮರಳವಾಡಿ ಅನ್ನಪೂರ್ಣೇಶ್ವರಿ ಆಶ್ರಮದ ಸಮೀಪದ ರಾವತ್ತಿನಹಳ್ಳ ಏರಿಯ ಮೇಲೆ ಎಸೆದು ಹೋಗಿದ್ದಾರೆ.
ಭಾನುವಾರ ಬೆಳಿಗ್ಗೆ ಮರಳವಾಡಿ ಆಶ್ರಮದ ರಾವತ್ತನಹಳ್ಳ ಏರಿಯ ಮೇಲೆ ಶನಿವಾರ ಮಧ್ಯರಾತ್ರಿ ಶವವನ್ನು ಕಂಡು ಗ್ರಾಮಸ್ಥರು ಹಾರೋಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವದ ಕತ್ತು, ತಲೆ ಹಾಗೂ ಹಲವೆಡೆ ತೀವ್ರ ತರದ ಪೆಟ್ಟು ಬಿದ್ದಿರುವುದು ಕಂಡು ಬಂದಿದೆ. ಸ್ಥಳಕ್ಕೆ ಹಾರೋಹಳ್ಳಿ, ಕಗ್ಗಲಿಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ರಾಮನಗರ ಡಿವೈಎಸ್ಪಿ ದಿನಕರ್ಶೆಟ್ಟಿ, ಹಾರೋಹಳ್ಳಿ ಸರ್ಕಲ್ ಇನ್ಸ್ಪೆಕ್ಟರ್ ಅರ್ಜುನ್ ಭೇಟಿ ನೀಡಿದರು. ಪ್ರಕರಣ ದಾಖಲಿಸಿಕೊಂಡಿರುವ ಹಾರೋಹಳ್ಳಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
20ಕೆಆರ್ ಎಂಎನ್ 12,13.ಜೆಪಿಜಿಹಾರೋಹಳ್ಳಿ ತಾಲೂಕು ಮರಳವಾಡಿ ಸಮೀಪ ಕೊಲೆಯಾಗಿ ಬಿದ್ದಿರುವ ಲಿಖಿತ್ ಶವವಾಗಿ ಬಿದ್ದಿರುವ ಸ್ಥಳ.